July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಗೋಪಾಲ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಸುಶೀಲ ಹೆಗ್ಡೆ, ರತ್ನರಾಜ ಹೆಗ್ಡೆ, ರೊನಾಲ್ಡ್ ತಾವ್ರ್ಹೋ, ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಇವರುಗಳ ಸಹಕಾರದೊಂದಿಗೆ ಸುಮಾರು ರೂ.35ಸಾವಿರಗಳ ಆರ್ಥಿಕ ನೆರವನ್ನು ಚೆಕ್ ಮೂಲಕ ನೌಕರರ ಕುಟುಂಬಕ್ಕೆ ನೀಡಲಾಯಿತು.

ಅನಾರೋಗ್ಯದಲ್ಲಿರುವ ಗೋಪಾಲ ಕೆ ಇಂದಬೆಟ್ಟು ಬಿಲ್ ಕಲೆಕ್ಟರ್ ಇವರಿಗೆ ಪಡಿತರವನ್ನು ವಿತರಿಸಿದರು. ಹಾಗೂ ಪ್ರತಿ ತಿಂಗಳು ಪಡಿತರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ರುಕೇಶ್ ಕಲ್ಮಂಜ, ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀಮತಿ ಮೀನಾಕ್ಷಿ ನಡ, ಉಪಸ್ಥಿತರಿದ್ದರು. ನೌಕರರ ಸಂಘದಿಂದ ಕೃತಜ್ಞತೆ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ವೈದ್ಯಕೀಯ ನೆರವು

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya
error: Content is protected !!