23.6 C
ಪುತ್ತೂರು, ಬೆಳ್ತಂಗಡಿ
June 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

ಉಜಿರೆ: ಮನುಷ್ಯನು ಜೀವನದಲ್ಲಿ ಕಷ್ಟವನ್ನು ಅನುಭವಿಸಿದರೆ ಮಾತ್ರ ಮುಂದೆ ಸುಖವನ್ನು ಕಾಣಬಹುದು ಕಷ್ಟವನ್ನು ಅನುಭವಿಸದೆ ಸುಖವನ್ನು ಕಾಣಲು ಸಾಧ್ಯವಿಲ್ಲ ಹಸಿವು ಬಡತನ ಉದ್ಯೋಗ ಅವಮಾನ ಮತ್ತು ಸೋಲು ಈ ಹಂತಗಳನ್ನು ಕಲಿತರೆ ಜೀವನದಲ್ಲಿ ಯಾವ ಸಾಧನೆಯನ್ನು ಬೇಕಾದರೂ ಮಾಡಬಹುದು ಎಂದು ಉಜಿರೆ, ಲಕ್ಷ್ಮಿ ಗ್ರೂಪ್ಸ್ ಮಾಲಕರಾದ ಮೋಹನ್ ಕುಮಾರ್ ಹೇಳಿದರು.

ಇವರ ಸಾಧನೆಗೆ ಪ್ರೋತ್ಸಾಹ ನೀಡಿದ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆ ,ಮಾತೃಶ್ರೀ ಹೇಮಾವತಿ ಹೆಗ್ಗಡೆ ಮತ್ತು ಡಿ ಹರ್ಷೇಂದ್ರ ಕುಮಾರ್ ಇವರನ್ನು ಸ್ಮರಿಸಿ ಅವರು ಮಾ. 9 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕಿಯಾದ ಶ್ರೀಮತಿ ಮೇರಿಸ್ಮಿತಾ ರವರು ಹಳೆ ವಿದ್ಯಾರ್ಥಿ ಸಂಘದ ಮಹತ್ವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಯರಾಜ್ ಜೈನ್ ಇವರು ಹಳೆ ವಿದ್ಯಾರ್ಥಿ ಸಂಘದ ಮುಂದಿನ ರೂಪುರೇಷೆಗಳ ಬಗ್ಗೆ ವಿವರಿಸಿದರು ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಉಪಸ್ಥಿತರಿದ್ದರು. ಅರವ ರಾಕ್ ಬ್ಯಾಂಡ್ ವತಿಯಿಂದ ಲೈವ್ ಮ್ಯೂಸಿಕ್ ನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಉನ್ನತ ಸಾಧನೆಗೈದ ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಕಾಲೇಜಿನ ಉಪನ್ಯಾಸಕಿ ಶ್ರೀಮತಿ ರೇನಿಟಾ ಫೆರ್ನಾಂಡಿಸ್ ಸಭೆಗೆ ಪರಿಚಯಿಸಿದರು. ನಿಖಿತ್ ಜೈನ್ ಸ್ವಾಗತಿಸಿದರು. ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಶ್ಮಿತಾ ವಂದಿಸಿದರು. ಕಾಲೇಜಿನ ಹಿರಿಯ ಹಳೆ ವಿದ್ಯಾರ್ಥಿ ಸಾಯಿ ಕಿರಣ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya
error: Content is protected !!