22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

ಉಜಿರೆ: ಮನುಷ್ಯನು ಜೀವನದಲ್ಲಿ ಕಷ್ಟವನ್ನು ಅನುಭವಿಸಿದರೆ ಮಾತ್ರ ಮುಂದೆ ಸುಖವನ್ನು ಕಾಣಬಹುದು ಕಷ್ಟವನ್ನು ಅನುಭವಿಸದೆ ಸುಖವನ್ನು ಕಾಣಲು ಸಾಧ್ಯವಿಲ್ಲ ಹಸಿವು ಬಡತನ ಉದ್ಯೋಗ ಅವಮಾನ ಮತ್ತು ಸೋಲು ಈ ಹಂತಗಳನ್ನು ಕಲಿತರೆ ಜೀವನದಲ್ಲಿ ಯಾವ ಸಾಧನೆಯನ್ನು ಬೇಕಾದರೂ ಮಾಡಬಹುದು ಎಂದು ಉಜಿರೆ, ಲಕ್ಷ್ಮಿ ಗ್ರೂಪ್ಸ್ ಮಾಲಕರಾದ ಮೋಹನ್ ಕುಮಾರ್ ಹೇಳಿದರು.

ಇವರ ಸಾಧನೆಗೆ ಪ್ರೋತ್ಸಾಹ ನೀಡಿದ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆ ,ಮಾತೃಶ್ರೀ ಹೇಮಾವತಿ ಹೆಗ್ಗಡೆ ಮತ್ತು ಡಿ ಹರ್ಷೇಂದ್ರ ಕುಮಾರ್ ಇವರನ್ನು ಸ್ಮರಿಸಿ ಅವರು ಮಾ. 9 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕಿಯಾದ ಶ್ರೀಮತಿ ಮೇರಿಸ್ಮಿತಾ ರವರು ಹಳೆ ವಿದ್ಯಾರ್ಥಿ ಸಂಘದ ಮಹತ್ವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಯರಾಜ್ ಜೈನ್ ಇವರು ಹಳೆ ವಿದ್ಯಾರ್ಥಿ ಸಂಘದ ಮುಂದಿನ ರೂಪುರೇಷೆಗಳ ಬಗ್ಗೆ ವಿವರಿಸಿದರು ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಉಪಸ್ಥಿತರಿದ್ದರು. ಅರವ ರಾಕ್ ಬ್ಯಾಂಡ್ ವತಿಯಿಂದ ಲೈವ್ ಮ್ಯೂಸಿಕ್ ನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಉನ್ನತ ಸಾಧನೆಗೈದ ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಕಾಲೇಜಿನ ಉಪನ್ಯಾಸಕಿ ಶ್ರೀಮತಿ ರೇನಿಟಾ ಫೆರ್ನಾಂಡಿಸ್ ಸಭೆಗೆ ಪರಿಚಯಿಸಿದರು. ನಿಖಿತ್ ಜೈನ್ ಸ್ವಾಗತಿಸಿದರು. ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಶ್ಮಿತಾ ವಂದಿಸಿದರು. ಕಾಲೇಜಿನ ಹಿರಿಯ ಹಳೆ ವಿದ್ಯಾರ್ಥಿ ಸಾಯಿ ಕಿರಣ್ ಕಾರ್ಯಕ್ರಮ ನಿರೂಪಿಸಿದರು.

Related posts

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya
error: Content is protected !!