24.1 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಮಾನ್ವಿಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ವಿಮಲ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ಅಧ್ಯಕ್ಷೆ ರಮ್ಯಾ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ಮತ್ತು ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ವಿಜಯಲಕ್ಷ್ಮಿ, ನಿವೃತ್ತ ಶಿಕ್ಷಕಿ ಮನೋರಮಾ, ವಲಯ ಮೇಲ್ವಿಚಾರಕಿ ವೀಣಾಶ್ರೀ ಹಾಗೂ ಗ್ರಂಥಪಾಲಕಿ ಮಂಜುಳಾ ಉಪಸ್ಥಿತರಿದ್ದರು.

ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಮಾಡಿ ಪದಾಧಿಕಾರಿಗಳಿಗೆ ಮತ್ತು ಉತ್ತಮ ಸಂಘಕ್ಕೆ ಗೌರವಿಸಲಾಯಿತು. ಸಂಜೀವಿನಿ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು, ತರಕಾರಿಗಳನ್ನು ಮಾರಾಟ ಮಾಡಲಾಯಿತು. ಒಕ್ಕೂಟದ ಸದಸ್ಯೆ ಅನಿತಾ ವಾರ್ಷಿಕ ವರದಿ ವಾಚಿಸಿದರು. ಪಶು ಸಖಿ ಯಶೋದಾ ಜಮಾಖರ್ಚಿನ ವೆಚ್ಚವನ್ನು ಮಂಡಿಸಿದರು.

ಕೃಷಿ ಸಖಿ ಸುಚೇತಾ ಪ್ರಾರ್ಥಿಸಿ, ಒಕ್ಕೂಟದ ಕಾರ್ಯದರ್ಶಿ ಧನಲಕ್ಷ್ಮೀ ಸ್ವಾಗತಿಸಿ, ಎಲ್‌ಸಿಆರ್‌ಪಿ ಪುಷ್ಪ ವಂದಿಸಿ, ಎಂಬಿಕೆ ಚಂದ್ರವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!