25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಮಾನ್ವಿಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ವಿಮಲ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ಅಧ್ಯಕ್ಷೆ ರಮ್ಯಾ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ಮತ್ತು ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ವಿಜಯಲಕ್ಷ್ಮಿ, ನಿವೃತ್ತ ಶಿಕ್ಷಕಿ ಮನೋರಮಾ, ವಲಯ ಮೇಲ್ವಿಚಾರಕಿ ವೀಣಾಶ್ರೀ ಹಾಗೂ ಗ್ರಂಥಪಾಲಕಿ ಮಂಜುಳಾ ಉಪಸ್ಥಿತರಿದ್ದರು.

ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಮಾಡಿ ಪದಾಧಿಕಾರಿಗಳಿಗೆ ಮತ್ತು ಉತ್ತಮ ಸಂಘಕ್ಕೆ ಗೌರವಿಸಲಾಯಿತು. ಸಂಜೀವಿನಿ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು, ತರಕಾರಿಗಳನ್ನು ಮಾರಾಟ ಮಾಡಲಾಯಿತು. ಒಕ್ಕೂಟದ ಸದಸ್ಯೆ ಅನಿತಾ ವಾರ್ಷಿಕ ವರದಿ ವಾಚಿಸಿದರು. ಪಶು ಸಖಿ ಯಶೋದಾ ಜಮಾಖರ್ಚಿನ ವೆಚ್ಚವನ್ನು ಮಂಡಿಸಿದರು.

ಕೃಷಿ ಸಖಿ ಸುಚೇತಾ ಪ್ರಾರ್ಥಿಸಿ, ಒಕ್ಕೂಟದ ಕಾರ್ಯದರ್ಶಿ ಧನಲಕ್ಷ್ಮೀ ಸ್ವಾಗತಿಸಿ, ಎಲ್‌ಸಿಆರ್‌ಪಿ ಪುಷ್ಪ ವಂದಿಸಿ, ಎಂಬಿಕೆ ಚಂದ್ರವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

Suddi Udaya

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya
error: Content is protected !!