July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ ಹೊಂದಿದ್ದು ಅವರನ್ನು ಸಂಘದ ವತಿಯಿಂದ ಮಾ.8ರಂದು ಮುಂಡಾಜೆ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಭಾಭವನದಲ್ಲಿ ಅಭಿನಂದಿಸಲಾಯಿತು.


ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ ರಾವ್ ರವರು ಅಧ್ಯಕ್ಷತೆ ವಹಿಸಿ , ಸದಾ ಹಸನ್ಮುಖಿಯಾದಂತಹ ಸಿಇಓ ಅವರು ಗ್ರಾಮದ ಪ್ರತಿ ಸದಸ್ಯರಲ್ಲಿಯೂ ಆತ್ಮೀಯವಾಗಿದ್ದು, 42 ವರ್ಷಗಳ ಕಾಲ ಸಂಘದಲ್ಲಿ ದುಡಿದು, ಸಂಘದ ಏಳಿಗೆಗೆ ಪ್ರಾಮಾಣಿಕ ಕೆಲಸ ನಿರ್ವಹಿಸಿ ಸಂಘದ ಏಳಿಗೆಗೆ ಇವರ ಸೇವೆ ಅಪಾರ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ನ ಸಂಚಾಲಕರು ನಾಮದೇವ ರಾವ್, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನೆರಿಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗೋಪಾಲ್ ಕೃಷ್ಣ , ನಿವೃತ್ತ ಸಿ ಇ ಓ ಆದ ನಾರಾಯಣ ಫಡಕೆ, ಊರಿನ ಹಿರಿಯ ಸದಸ್ಯರಾದ ಅಡೂರು ವೆಂಕಟರಾಯ ರಾವ್ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ರಾಘವ್ ಗೌಡ ಕುಡುಮಡ್ಕ, ನಿರ್ದೇಶಕರಾದ ವೆಂಕಟೇಶ್ವರ ಭಟ್ ಕಜೆ, ಚನ್ನಕೇಶವ ಅರಸ ಮಜಲು ,ಅಶ್ವಿನಿ ಹೆಬ್ಬಾರ್ ಮೋಹಿನಿ ,ಸುಮ ಗೋಖಲೆ, ಶಶಿಧರ್ ಕಲ್ಮಂಜ, ರಾಘವ ಕಲ್ಮಂಜ ,ಶಿವಪ್ರಸಾದ್, ಅಜಯ್ ಕಲ್ಲಿಕಟ್ ಉಪಸ್ಥಿತರಿದ್ದರು. ಊರಿನ ಕೃಷಿ ಸದಸ್ಯ ಮಿತ್ರರು, ಸಂಘದ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಕಕ್ಕಿಂಜೆ ಶಾಖಾ ಪ್ರಬಂಧಕಿ ಪುಷ್ಪಾವತಿ ಸ್ವಾಗತಿಸಿ, ನೆರಿಯ ಶಾಖಾ ಪ್ರಬಂಧಕ ಸದಾನಂದ ಡಿ ವಂದಿಸಿದರು. ಕಾರ್ಯಕ್ರಮವನ್ನು ನೂತನ ಸಿಇಒ ಪ್ರಸನ್ನ ಪರಾಂಜಪೆ ನಿರೂಪಿಸಿದರು.

Related posts

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಡಿ. 13-14 ಬಳಂಜ ಶಾಲೆಗೆ ಅಮೃತ ಸಂಭ್ರಮ, ವಿಶೇಷ ಕಾರ್ಯಕ್ರಮಗಳ ಆಯೋಜನೆ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!