25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಮಡಂತ್ಯಾರು:ಸಹಕಾರಿ ರಂಗದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿಯ ಅಭ್ಯರ್ಥಿಗಳ ಪರವಾಗಿ ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಎಸ್.ಡಿ.ಎಸ್ ಹಾಲ್ ಮಡಂತ್ಯಾರಿನಲ್ಲಿ ಮಾ 8 ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕರ್ತರಿಗೆ ಹಾಗೂ ನೂತನ ಆಡಳಿತ ಮಂಡಳಿಗೆ ಅಭಿನಂದನೆ ತಿಳಿಸಿ, ಪ್ರತಿಯೊಬ್ಬ ಕಾರ್ಯಕರ್ತ ಹಾಗೂ ಕೃಷಿಕರಿಗೆ ಸೊಸೈಟಿಯಿಂದ ಉತ್ತಮ ಸ್ಪಂದನೆ ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜೋಯಲ್ ಮೆಂಡೋನ್ಸ್ ಅಧ್ಯಕ್ಷತೆ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ತುಂಗಪ್ಪ ಎಂ ಬಂಗೇರ,ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ರೂಪಾ ನವೀನ್ ಕೊಡ್ಲಕ್ಕೆ, ಚುನಾವಣಾ ಪ್ರಭಾರಿ ಪದ್ಮನಾಭ ಅರ್ಕಜೆ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಕಾಂತಪ್ಪ ಗೌಡ ಹಟ್ಟತ್ತೋಡಿ,ನಿರ್ದೇಶಕರುಗಳಾದ ಶ್ರೀಮತಿ ಧನಲಕ್ಷ್ಮಿ, ಅಮಿತಾ ಪ್ರಿಯಾ ಲೋಬೋ,ಮಹಾಬಲ ಕೆ, ಸುರೇಶ್, ಗೋಪಾಲಕೃಷ್ಣ ಕೆ,ಗಣೇಶ್, ಚುನಾವಣೆಯಲ್ಲಿ ಸ್ಪರ್ದಿಸಿದ್ದ ಪುಷ್ಪರಾಜ್ ಜೈನ್, ಪುರುಷೋತ್ತಮ ಶೆಟ್ಟಿ, ಶಕ್ತಿಕೇಂದ್ರದ ಪ್ರಮುಖರಾದ ರಾಜೇಶ್, ಶೈಲೇಶ್ ಪುಳಿಮಜಲು, ದಿನೇಶ್ ಕರ್ಕೇರ ಸೋಣಂದೂರು ಉಪಸ್ಥಿತರಿದ್ದರು.

ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರನ್ನು ಗೌರವಿಸಲಾಯಿತು. ಕಿಶೋರ್ ಎಚ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya
error: Content is protected !!