July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಮಾನ್ವಿಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ವಿಮಲ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ಅಧ್ಯಕ್ಷೆ ರಮ್ಯಾ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ಮತ್ತು ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ವಿಜಯಲಕ್ಷ್ಮಿ, ನಿವೃತ್ತ ಶಿಕ್ಷಕಿ ಮನೋರಮಾ, ವಲಯ ಮೇಲ್ವಿಚಾರಕಿ ವೀಣಾಶ್ರೀ ಹಾಗೂ ಗ್ರಂಥಪಾಲಕಿ ಮಂಜುಳಾ ಉಪಸ್ಥಿತರಿದ್ದರು.

ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಮಾಡಿ ಪದಾಧಿಕಾರಿಗಳಿಗೆ ಮತ್ತು ಉತ್ತಮ ಸಂಘಕ್ಕೆ ಗೌರವಿಸಲಾಯಿತು. ಸಂಜೀವಿನಿ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು, ತರಕಾರಿಗಳನ್ನು ಮಾರಾಟ ಮಾಡಲಾಯಿತು. ಒಕ್ಕೂಟದ ಸದಸ್ಯೆ ಅನಿತಾ ವಾರ್ಷಿಕ ವರದಿ ವಾಚಿಸಿದರು. ಪಶು ಸಖಿ ಯಶೋದಾ ಜಮಾಖರ್ಚಿನ ವೆಚ್ಚವನ್ನು ಮಂಡಿಸಿದರು.

ಕೃಷಿ ಸಖಿ ಸುಚೇತಾ ಪ್ರಾರ್ಥಿಸಿ, ಒಕ್ಕೂಟದ ಕಾರ್ಯದರ್ಶಿ ಧನಲಕ್ಷ್ಮೀ ಸ್ವಾಗತಿಸಿ, ಎಲ್‌ಸಿಆರ್‌ಪಿ ಪುಷ್ಪ ವಂದಿಸಿ, ಎಂಬಿಕೆ ಚಂದ್ರವತಿ ಕಾರ್ಯಕ್ರಮ ನಿರೂಪಿಸಿದರು.

Related posts

ತಣ್ಣೀರುಪಂತ: ಕುದ್ರಡ್ಕ ನಿವಾಸಿ ಗಿರಿಜಾ ನಿಧನ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya
error: Content is protected !!