23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಮಾನ್ವಿಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ವಿಮಲ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ಅಧ್ಯಕ್ಷೆ ರಮ್ಯಾ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ಮತ್ತು ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ವಿಜಯಲಕ್ಷ್ಮಿ, ನಿವೃತ್ತ ಶಿಕ್ಷಕಿ ಮನೋರಮಾ, ವಲಯ ಮೇಲ್ವಿಚಾರಕಿ ವೀಣಾಶ್ರೀ ಹಾಗೂ ಗ್ರಂಥಪಾಲಕಿ ಮಂಜುಳಾ ಉಪಸ್ಥಿತರಿದ್ದರು.

ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಮಾಡಿ ಪದಾಧಿಕಾರಿಗಳಿಗೆ ಮತ್ತು ಉತ್ತಮ ಸಂಘಕ್ಕೆ ಗೌರವಿಸಲಾಯಿತು. ಸಂಜೀವಿನಿ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು, ತರಕಾರಿಗಳನ್ನು ಮಾರಾಟ ಮಾಡಲಾಯಿತು. ಒಕ್ಕೂಟದ ಸದಸ್ಯೆ ಅನಿತಾ ವಾರ್ಷಿಕ ವರದಿ ವಾಚಿಸಿದರು. ಪಶು ಸಖಿ ಯಶೋದಾ ಜಮಾಖರ್ಚಿನ ವೆಚ್ಚವನ್ನು ಮಂಡಿಸಿದರು.

ಕೃಷಿ ಸಖಿ ಸುಚೇತಾ ಪ್ರಾರ್ಥಿಸಿ, ಒಕ್ಕೂಟದ ಕಾರ್ಯದರ್ಶಿ ಧನಲಕ್ಷ್ಮೀ ಸ್ವಾಗತಿಸಿ, ಎಲ್‌ಸಿಆರ್‌ಪಿ ಪುಷ್ಪ ವಂದಿಸಿ, ಎಂಬಿಕೆ ಚಂದ್ರವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!