September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಮಾನ್ವಿಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ವಿಮಲ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ಅಧ್ಯಕ್ಷೆ ರಮ್ಯಾ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ಮತ್ತು ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ವಿಜಯಲಕ್ಷ್ಮಿ, ನಿವೃತ್ತ ಶಿಕ್ಷಕಿ ಮನೋರಮಾ, ವಲಯ ಮೇಲ್ವಿಚಾರಕಿ ವೀಣಾಶ್ರೀ ಹಾಗೂ ಗ್ರಂಥಪಾಲಕಿ ಮಂಜುಳಾ ಉಪಸ್ಥಿತರಿದ್ದರು.

ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಮಾಡಿ ಪದಾಧಿಕಾರಿಗಳಿಗೆ ಮತ್ತು ಉತ್ತಮ ಸಂಘಕ್ಕೆ ಗೌರವಿಸಲಾಯಿತು. ಸಂಜೀವಿನಿ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು, ತರಕಾರಿಗಳನ್ನು ಮಾರಾಟ ಮಾಡಲಾಯಿತು. ಒಕ್ಕೂಟದ ಸದಸ್ಯೆ ಅನಿತಾ ವಾರ್ಷಿಕ ವರದಿ ವಾಚಿಸಿದರು. ಪಶು ಸಖಿ ಯಶೋದಾ ಜಮಾಖರ್ಚಿನ ವೆಚ್ಚವನ್ನು ಮಂಡಿಸಿದರು.

ಕೃಷಿ ಸಖಿ ಸುಚೇತಾ ಪ್ರಾರ್ಥಿಸಿ, ಒಕ್ಕೂಟದ ಕಾರ್ಯದರ್ಶಿ ಧನಲಕ್ಷ್ಮೀ ಸ್ವಾಗತಿಸಿ, ಎಲ್‌ಸಿಆರ್‌ಪಿ ಪುಷ್ಪ ವಂದಿಸಿ, ಎಂಬಿಕೆ ಚಂದ್ರವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya
error: Content is protected !!