July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಗೋಪಾಲ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಸುಶೀಲ ಹೆಗ್ಡೆ, ರತ್ನರಾಜ ಹೆಗ್ಡೆ, ರೊನಾಲ್ಡ್ ತಾವ್ರ್ಹೋ, ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಇವರುಗಳ ಸಹಕಾರದೊಂದಿಗೆ ಸುಮಾರು ರೂ.35ಸಾವಿರಗಳ ಆರ್ಥಿಕ ನೆರವನ್ನು ಚೆಕ್ ಮೂಲಕ ನೌಕರರ ಕುಟುಂಬಕ್ಕೆ ನೀಡಲಾಯಿತು.

ಅನಾರೋಗ್ಯದಲ್ಲಿರುವ ಗೋಪಾಲ ಕೆ ಇಂದಬೆಟ್ಟು ಬಿಲ್ ಕಲೆಕ್ಟರ್ ಇವರಿಗೆ ಪಡಿತರವನ್ನು ವಿತರಿಸಿದರು. ಹಾಗೂ ಪ್ರತಿ ತಿಂಗಳು ಪಡಿತರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ರುಕೇಶ್ ಕಲ್ಮಂಜ, ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀಮತಿ ಮೀನಾಕ್ಷಿ ನಡ, ಉಪಸ್ಥಿತರಿದ್ದರು. ನೌಕರರ ಸಂಘದಿಂದ ಕೃತಜ್ಞತೆ ಸಲ್ಲಿಸಲಾಯಿತು.

Related posts

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!