March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ ಹೊಂದಿದ್ದು ಅವರನ್ನು ಸಂಘದ ವತಿಯಿಂದ ಮಾ.8ರಂದು ಮುಂಡಾಜೆ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಭಾಭವನದಲ್ಲಿ ಅಭಿನಂದಿಸಲಾಯಿತು.


ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ ರಾವ್ ರವರು ಅಧ್ಯಕ್ಷತೆ ವಹಿಸಿ , ಸದಾ ಹಸನ್ಮುಖಿಯಾದಂತಹ ಸಿಇಓ ಅವರು ಗ್ರಾಮದ ಪ್ರತಿ ಸದಸ್ಯರಲ್ಲಿಯೂ ಆತ್ಮೀಯವಾಗಿದ್ದು, 42 ವರ್ಷಗಳ ಕಾಲ ಸಂಘದಲ್ಲಿ ದುಡಿದು, ಸಂಘದ ಏಳಿಗೆಗೆ ಪ್ರಾಮಾಣಿಕ ಕೆಲಸ ನಿರ್ವಹಿಸಿ ಸಂಘದ ಏಳಿಗೆಗೆ ಇವರ ಸೇವೆ ಅಪಾರ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ನ ಸಂಚಾಲಕರು ನಾಮದೇವ ರಾವ್, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನೆರಿಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗೋಪಾಲ್ ಕೃಷ್ಣ , ನಿವೃತ್ತ ಸಿ ಇ ಓ ಆದ ನಾರಾಯಣ ಫಡಕೆ, ಊರಿನ ಹಿರಿಯ ಸದಸ್ಯರಾದ ಅಡೂರು ವೆಂಕಟರಾಯ ರಾವ್ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ರಾಘವ್ ಗೌಡ ಕುಡುಮಡ್ಕ, ನಿರ್ದೇಶಕರಾದ ವೆಂಕಟೇಶ್ವರ ಭಟ್ ಕಜೆ, ಚನ್ನಕೇಶವ ಅರಸ ಮಜಲು ,ಅಶ್ವಿನಿ ಹೆಬ್ಬಾರ್ ಮೋಹಿನಿ ,ಸುಮ ಗೋಖಲೆ, ಶಶಿಧರ್ ಕಲ್ಮಂಜ, ರಾಘವ ಕಲ್ಮಂಜ ,ಶಿವಪ್ರಸಾದ್, ಅಜಯ್ ಕಲ್ಲಿಕಟ್ ಉಪಸ್ಥಿತರಿದ್ದರು. ಊರಿನ ಕೃಷಿ ಸದಸ್ಯ ಮಿತ್ರರು, ಸಂಘದ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಕಕ್ಕಿಂಜೆ ಶಾಖಾ ಪ್ರಬಂಧಕಿ ಪುಷ್ಪಾವತಿ ಸ್ವಾಗತಿಸಿ, ನೆರಿಯ ಶಾಖಾ ಪ್ರಬಂಧಕ ಸದಾನಂದ ಡಿ ವಂದಿಸಿದರು. ಕಾರ್ಯಕ್ರಮವನ್ನು ನೂತನ ಸಿಇಒ ಪ್ರಸನ್ನ ಪರಾಂಜಪೆ ನಿರೂಪಿಸಿದರು.

Related posts

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya
error: Content is protected !!