25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ ಹೊಂದಿದ್ದು ಅವರನ್ನು ಸಂಘದ ವತಿಯಿಂದ ಮಾ.8ರಂದು ಮುಂಡಾಜೆ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಭಾಭವನದಲ್ಲಿ ಅಭಿನಂದಿಸಲಾಯಿತು.


ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ ರಾವ್ ರವರು ಅಧ್ಯಕ್ಷತೆ ವಹಿಸಿ , ಸದಾ ಹಸನ್ಮುಖಿಯಾದಂತಹ ಸಿಇಓ ಅವರು ಗ್ರಾಮದ ಪ್ರತಿ ಸದಸ್ಯರಲ್ಲಿಯೂ ಆತ್ಮೀಯವಾಗಿದ್ದು, 42 ವರ್ಷಗಳ ಕಾಲ ಸಂಘದಲ್ಲಿ ದುಡಿದು, ಸಂಘದ ಏಳಿಗೆಗೆ ಪ್ರಾಮಾಣಿಕ ಕೆಲಸ ನಿರ್ವಹಿಸಿ ಸಂಘದ ಏಳಿಗೆಗೆ ಇವರ ಸೇವೆ ಅಪಾರ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ನ ಸಂಚಾಲಕರು ನಾಮದೇವ ರಾವ್, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನೆರಿಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗೋಪಾಲ್ ಕೃಷ್ಣ , ನಿವೃತ್ತ ಸಿ ಇ ಓ ಆದ ನಾರಾಯಣ ಫಡಕೆ, ಊರಿನ ಹಿರಿಯ ಸದಸ್ಯರಾದ ಅಡೂರು ವೆಂಕಟರಾಯ ರಾವ್ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ರಾಘವ್ ಗೌಡ ಕುಡುಮಡ್ಕ, ನಿರ್ದೇಶಕರಾದ ವೆಂಕಟೇಶ್ವರ ಭಟ್ ಕಜೆ, ಚನ್ನಕೇಶವ ಅರಸ ಮಜಲು ,ಅಶ್ವಿನಿ ಹೆಬ್ಬಾರ್ ಮೋಹಿನಿ ,ಸುಮ ಗೋಖಲೆ, ಶಶಿಧರ್ ಕಲ್ಮಂಜ, ರಾಘವ ಕಲ್ಮಂಜ ,ಶಿವಪ್ರಸಾದ್, ಅಜಯ್ ಕಲ್ಲಿಕಟ್ ಉಪಸ್ಥಿತರಿದ್ದರು. ಊರಿನ ಕೃಷಿ ಸದಸ್ಯ ಮಿತ್ರರು, ಸಂಘದ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಕಕ್ಕಿಂಜೆ ಶಾಖಾ ಪ್ರಬಂಧಕಿ ಪುಷ್ಪಾವತಿ ಸ್ವಾಗತಿಸಿ, ನೆರಿಯ ಶಾಖಾ ಪ್ರಬಂಧಕ ಸದಾನಂದ ಡಿ ವಂದಿಸಿದರು. ಕಾರ್ಯಕ್ರಮವನ್ನು ನೂತನ ಸಿಇಒ ಪ್ರಸನ್ನ ಪರಾಂಜಪೆ ನಿರೂಪಿಸಿದರು.

Related posts

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!