March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ.11ರಂದು ಗ್ರಾ.ಪಂ. ಅಧ್ಯಕ್ಷೆ ಎನ್.ರಹಿಯಾನತ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಶುಪಾಲನಾ ಮತ್ತು ಪಶುಸಂಗೋಪನಾ ಇಲಾಖೆ ವೈದ್ಯಾಧಿಕಾರಿ ವಿಶ್ವನಾಥ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಪುಷ್ಪಾ, ಸದಸ್ಯರಾದ ಅನ್ವರ್ ಎನ್, ಅಬ್ದುಲ್ ರಜಾಕ್, ಶೇಖರ ಪೂಜಾರಿ, ಯಮುನಾ, ನೆಬಿಸಾ, ಕೆ.ಎಮ್. ಹಕೀಮ್ ಮತ್ತು ಅಸಿಮಾ , ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಮತ್ತು ಕೃಷಿ ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಸುಮಯ್ಯ ಸ್ವಾಗತಿಸಿ, ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ಶಾಪಿ ವಾರ್ಡ್ ಸಭೆಗಳ ಬೇಡಿಕೆ ವಾಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುಲಾಬಿ, ಗ್ರಾಮ ಆಡಳಿತ ಅಧಿಕಾರಿ ಸಾಕಮ್ಮ, ಪಿಆರ್ ಡಿ ಇಂಜಿನಿಯರ್ ಗಫೂರ್ ಸಾಬ್, ಶಿಕ್ಷಣ ಇಲಾಖೆ ಸಿಆರ್ ಪಿ ಶರೀಫ್ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya
error: Content is protected !!