July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ.11ರಂದು ಗ್ರಾ.ಪಂ. ಅಧ್ಯಕ್ಷೆ ಎನ್.ರಹಿಯಾನತ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಶುಪಾಲನಾ ಮತ್ತು ಪಶುಸಂಗೋಪನಾ ಇಲಾಖೆ ವೈದ್ಯಾಧಿಕಾರಿ ವಿಶ್ವನಾಥ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಪುಷ್ಪಾ, ಸದಸ್ಯರಾದ ಅನ್ವರ್ ಎನ್, ಅಬ್ದುಲ್ ರಜಾಕ್, ಶೇಖರ ಪೂಜಾರಿ, ಯಮುನಾ, ನೆಬಿಸಾ, ಕೆ.ಎಮ್. ಹಕೀಮ್ ಮತ್ತು ಅಸಿಮಾ , ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಮತ್ತು ಕೃಷಿ ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಸುಮಯ್ಯ ಸ್ವಾಗತಿಸಿ, ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ಶಾಪಿ ವಾರ್ಡ್ ಸಭೆಗಳ ಬೇಡಿಕೆ ವಾಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುಲಾಬಿ, ಗ್ರಾಮ ಆಡಳಿತ ಅಧಿಕಾರಿ ಸಾಕಮ್ಮ, ಪಿಆರ್ ಡಿ ಇಂಜಿನಿಯರ್ ಗಫೂರ್ ಸಾಬ್, ಶಿಕ್ಷಣ ಇಲಾಖೆ ಸಿಆರ್ ಪಿ ಶರೀಫ್ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya
error: Content is protected !!