March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

ಮುಂಡಾಜೆ:ಕಳೆದ ವಾರವಷ್ಟೇ ನಿಡಿಗಲ್ ಹಳೇ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ‌.2000 ದಂಡ ವಿಧಿಸಿದ ಘಟನೆ ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ನಡೆದಿದ್ದು ಅಂಥದ್ದೇ ಘಟನೆ ಮತ್ತೆ ಮರುಕಳಿಸಿದೆ.

ಮಾ.11 ರಂದು ಬೆಳಗ್ಗಿನ ಹೊತ್ತು ನಿಡಿಗಲ್ ಹೊಸ ಸೇತುವೆಯ ಬಳಿ ತ್ಯಾಜ್ಯ ಕಂಡುಬಂದಿದ್ದು ಯಾರೋ ನದಿಯನ್ನು ಗುರಿಯಾಗಿಸಿ ಎಸೆದ ತ್ಯಾಜ್ಯವು ಸೇತುವೆಯ ಮೇಲೆ ಬಿದ್ದಿರುತ್ತದೆ. ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಕಸದ ಚೀಲವನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಕೆಲವು ದಾಖಲೆಗಳು ಸಿಕ್ಕಿದ್ದು ಅದು ಉಜಿರೆಯ ವ್ಯಕ್ತಿಗಳದ್ದೆಂದು ತಿಳಿದು ಬಂದಿದೆ.

ಕೂಡಲೇ ಅವರನ್ನು ದೂರವಾಣಿ ಮೂಲಕ ಸ್ಥಳಕ್ಕೆ ಕರೆಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ. 1000 ದಂಡ ವಿಧಿಸಿ ಎಚ್ಚರಿಕೆ ನೀಡಿದ ಮುಂಡಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya
error: Content is protected !!