September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟ ಕಳೆಂಜ ಇದರ ಮಹಾಸಭೆಯನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆಸಲಾಯಿತು.

ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ರೈ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀಮತಿ ದೀಕ್ಷಾ ಮತ್ತು ಹರಿಣಾಕ್ಷಿ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಕಾರ್ಯದರ್ಶಿಯಾದ ಜಯಶ್ರೀ 2023-2024ರ ವರದಿಯನ್ನು ಹಾಗೂ ಜಮಾ ಖರ್ಚಿನ ವರದಿಯನ್ನು ಎಮ್ ಬಿ ಕೆ ವಿಮಲ ಮಂಡಿಸಿ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕರಾದ ವೀಣಾಶ್ರೀ ಮಹಾಸಭೆಯ ಉದ್ದೇಶ ಮತ್ತು ಜವಾಬ್ದಾರಿ ಮತ್ತು ಸಂಜೀವಿನಿ ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ನಂತರ ತುಳಸಿ ಸಂಜೀವಿನಿ ಸಂಘದ ಸದಸ್ಯ ಉತ್ಪಾದಿಸಿರುವ” ಉಪ್ಪಿನಕಾಯಿ” , ಉಮಾ ಸ್ತ್ರೀ ಶಕ್ತಿ ಸಂಘದ ಸದಸ್ಯರು ತಯಾರಿಸಿರುವ “ಪಿನಾಯಿಲ್” ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.

ನಂತರ ಉತ್ತಮ ಸಂಘವೆಂದು ಶ್ರೀ ದುರ್ಗಾ ಸಂಜೀವಿನಿ ಹಾಗೂ ಉಮಾ ಸ್ತ್ರೀ ಶಕ್ತಿ ಸಂಘವನ್ನು ಗುರುತಿಸಿ ಆ ಸಂಘದ ಸದಸ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ನಂತರದಲ್ಲಿ ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಒಕ್ಕೂಟದ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಮಹಾಸಭೆ ಹಾಗೂ ಮಹಿಳಾ ದಿನಾಚರಣೆಯ ಪ್ರಯುಕ್ತ ಏರ್ಪಡಿಸಲಾದ ವಿವಿಧ ಆಟೋಟ ಸ್ವರ್ಧೆಗಳ ಬಹುಮಾನ ವಿತರಣೆ ಯನ್ನು ಏರ್ಪಡಿಸಲಾಯಿತು. ಎಲ್.ಸಿ.ಆರ್.ಪಿ ಗೀತಾ ನಿರೂಪಣೆ ಮಾಡಿ ಪಶುಸಖಿ ಯಶೋದಾ ಧನ್ಯವಾದವಿತ್ತರು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!