25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

ಮುಂಡಾಜೆ:ಕಳೆದ ವಾರವಷ್ಟೇ ನಿಡಿಗಲ್ ಹಳೇ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ‌.2000 ದಂಡ ವಿಧಿಸಿದ ಘಟನೆ ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ನಡೆದಿದ್ದು ಅಂಥದ್ದೇ ಘಟನೆ ಮತ್ತೆ ಮರುಕಳಿಸಿದೆ.

ಮಾ.11 ರಂದು ಬೆಳಗ್ಗಿನ ಹೊತ್ತು ನಿಡಿಗಲ್ ಹೊಸ ಸೇತುವೆಯ ಬಳಿ ತ್ಯಾಜ್ಯ ಕಂಡುಬಂದಿದ್ದು ಯಾರೋ ನದಿಯನ್ನು ಗುರಿಯಾಗಿಸಿ ಎಸೆದ ತ್ಯಾಜ್ಯವು ಸೇತುವೆಯ ಮೇಲೆ ಬಿದ್ದಿರುತ್ತದೆ. ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಕಸದ ಚೀಲವನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಕೆಲವು ದಾಖಲೆಗಳು ಸಿಕ್ಕಿದ್ದು ಅದು ಉಜಿರೆಯ ವ್ಯಕ್ತಿಗಳದ್ದೆಂದು ತಿಳಿದು ಬಂದಿದೆ.

ಕೂಡಲೇ ಅವರನ್ನು ದೂರವಾಣಿ ಮೂಲಕ ಸ್ಥಳಕ್ಕೆ ಕರೆಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ. 1000 ದಂಡ ವಿಧಿಸಿ ಎಚ್ಚರಿಕೆ ನೀಡಿದ ಮುಂಡಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya
error: Content is protected !!