September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

ಮುಂಡಾಜೆ:ಕಳೆದ ವಾರವಷ್ಟೇ ನಿಡಿಗಲ್ ಹಳೇ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ‌.2000 ದಂಡ ವಿಧಿಸಿದ ಘಟನೆ ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ನಡೆದಿದ್ದು ಅಂಥದ್ದೇ ಘಟನೆ ಮತ್ತೆ ಮರುಕಳಿಸಿದೆ.

ಮಾ.11 ರಂದು ಬೆಳಗ್ಗಿನ ಹೊತ್ತು ನಿಡಿಗಲ್ ಹೊಸ ಸೇತುವೆಯ ಬಳಿ ತ್ಯಾಜ್ಯ ಕಂಡುಬಂದಿದ್ದು ಯಾರೋ ನದಿಯನ್ನು ಗುರಿಯಾಗಿಸಿ ಎಸೆದ ತ್ಯಾಜ್ಯವು ಸೇತುವೆಯ ಮೇಲೆ ಬಿದ್ದಿರುತ್ತದೆ. ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಕಸದ ಚೀಲವನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಕೆಲವು ದಾಖಲೆಗಳು ಸಿಕ್ಕಿದ್ದು ಅದು ಉಜಿರೆಯ ವ್ಯಕ್ತಿಗಳದ್ದೆಂದು ತಿಳಿದು ಬಂದಿದೆ.

ಕೂಡಲೇ ಅವರನ್ನು ದೂರವಾಣಿ ಮೂಲಕ ಸ್ಥಳಕ್ಕೆ ಕರೆಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ. 1000 ದಂಡ ವಿಧಿಸಿ ಎಚ್ಚರಿಕೆ ನೀಡಿದ ಮುಂಡಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಡಾ.ಎಸ್.ಡಿ ಶೆಟ್ಟಿ ನಿಧನಕ್ಕೆ ದ. ಕ.ಜಿಲ್ಲಾ ಕ.ಸಾ.ಪ ಸಂತಾಪ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya
error: Content is protected !!