September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

ಉಜಿರೆ : ರಾಷ್ಟ್ರೀಯ ಮಾನ್ಯತಾ ಮಂಡಳಿಯ ನಿಯಮದಂತೆ ವೈದ್ಯಕೀಯ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ರಾಷ್ಟ್ರೀಯ ಆಸ್ಪತ್ರೆಗಳ ಮನ್ಯತಾ ಮಂಡಳಿಯಿಂದ 2ನೇ ಬಾರಿಗೆ ಎನ್.ಎ.ಬಿ.ಹೆಚ್ ಪ್ರಮಾಣಪತ್ರ ದೊರೆತಿದೆ.


ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆಯವರು ಎನ್.ಎ.ಬಿ.ಹೆಚ್ ಪ್ರಮಾಣಪತ್ರವನ್ನು ಮಾ.10 ರಂದು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದು ಆಸ್ಪತ್ರೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಆಶಯದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ, ಹೆಗ್ಗಡೆ ಪರಿವಾರದ ಎಲ್ಲರ ಸಹಕಾರದಲ್ಲಿ ಆಸ್ಪತ್ರೆಯು ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡುತ್ತಿದೆ. ಗ್ರಾಮೀಣ ಜನತೆ ನಗರದ ಹೈಟೆಕ್ ವೈದ್ಯಕೀಯ ಸೇವೆಯಿಂದ ವಂಚಿತರಾಗದAತೆ ವಿವಿಧ ಸೌಲಭ್ಯಗಳನ್ನು ಇಲ್ಲಿ ನೀಡಲಾಗುತ್ತಿದೆ. ಅತ್ಯಾಧುನಿಕ ವೈದ್ಯಕೀಯ ಸಲಕರಣೆಗಳು, ಯಶಸ್ವಿ ಶಸ್ತ್ರ ಚಿಕಿತ್ಸೆಗಳು, ವಿಶೇಷ ಕಾಳಜಿಯ ಆರೈಕೆ, ಮಿತದರದ ಚಿಕಿತ್ಸೆ, ಶುಚಿತ್ವದೊಂದಿಗೆ ಸ್ನೇಹಮಯ ವಾತಾವರಣ, ಉಚಿತ ಡಯಾಲಿಸಿಸ್ ಸೇವೆ, ಉಚಿತ ವೈದ್ಯಕೀಯ ಶಿಬಿರಗಳು, -ಎಲ್ಲವೂ ಜನರ ವಿಶ್ವಾಸಗಳಿಸಿದೆ.


ಭಾರತದ ಪ್ರಸೂತಿ ಮತ್ತು ಸ್ತಿçÃರೋಗ ಶಾಸ್ತçದ ವೈದ್ಯರನ್ನು ಪ್ರತಿನಿಧಿಸುವ ವೃತ್ತಿಪರ ಸಂಸ್ಥೆಯಾದ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾ‍ಸ್ತ್ರ ದ ಸೊಸೈಟಿಗಳ ಒಕ್ಕೂಟ ಸಂಸ್ಥೆಯಿಂದ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಅನುಸರಿಸುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಮಾನ್ಯತಾ ಪ್ರಮಾಣಪತ್ರ ಕೂಡ ಈಗಾಗಲೇ ದೊರೆತಿದೆ.
ಈ ಆಸ್ಪತ್ರೆಯು ರಾಷ್ಟ್ರೀಯ ಮಾನ್ಯತಾ ಮಂಡಳಿಯ ಮಾನದಂಡದಂತೆ ವೈದ್ಯಕೀಯ ಸೇವೆ ನೀಡುತ್ತಿರುವುದರಿಂದ 2ನೇ ಬಾರಿಗೆ ಎನ್.ಎ.ಬಿ.ಹೆಚ್ ಪ್ರಮಾಣಪತ್ರ ದೊರೆತ್ತಿದ್ದು, ಡಿ. ಹರ್ಷೇಂದ್ರ ಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.


ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಡಾ| ಮೀರಾ ಅನುಪಮಾ, ಡಾ| ಪ್ರೌಸ್ಟಿಲ್ ಹಾಗೂ ಎನ್.ಎ.ಬಿ.ಹೆಚ್ ನಿಯಮ ಪಾಲನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya
error: Content is protected !!