23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟ ಕಳೆಂಜ ಇದರ ಮಹಾಸಭೆಯನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆಸಲಾಯಿತು.

ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ರೈ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀಮತಿ ದೀಕ್ಷಾ ಮತ್ತು ಹರಿಣಾಕ್ಷಿ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಕಾರ್ಯದರ್ಶಿಯಾದ ಜಯಶ್ರೀ 2023-2024ರ ವರದಿಯನ್ನು ಹಾಗೂ ಜಮಾ ಖರ್ಚಿನ ವರದಿಯನ್ನು ಎಮ್ ಬಿ ಕೆ ವಿಮಲ ಮಂಡಿಸಿ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕರಾದ ವೀಣಾಶ್ರೀ ಮಹಾಸಭೆಯ ಉದ್ದೇಶ ಮತ್ತು ಜವಾಬ್ದಾರಿ ಮತ್ತು ಸಂಜೀವಿನಿ ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ನಂತರ ತುಳಸಿ ಸಂಜೀವಿನಿ ಸಂಘದ ಸದಸ್ಯ ಉತ್ಪಾದಿಸಿರುವ” ಉಪ್ಪಿನಕಾಯಿ” , ಉಮಾ ಸ್ತ್ರೀ ಶಕ್ತಿ ಸಂಘದ ಸದಸ್ಯರು ತಯಾರಿಸಿರುವ “ಪಿನಾಯಿಲ್” ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.

ನಂತರ ಉತ್ತಮ ಸಂಘವೆಂದು ಶ್ರೀ ದುರ್ಗಾ ಸಂಜೀವಿನಿ ಹಾಗೂ ಉಮಾ ಸ್ತ್ರೀ ಶಕ್ತಿ ಸಂಘವನ್ನು ಗುರುತಿಸಿ ಆ ಸಂಘದ ಸದಸ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ನಂತರದಲ್ಲಿ ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಒಕ್ಕೂಟದ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಮಹಾಸಭೆ ಹಾಗೂ ಮಹಿಳಾ ದಿನಾಚರಣೆಯ ಪ್ರಯುಕ್ತ ಏರ್ಪಡಿಸಲಾದ ವಿವಿಧ ಆಟೋಟ ಸ್ವರ್ಧೆಗಳ ಬಹುಮಾನ ವಿತರಣೆ ಯನ್ನು ಏರ್ಪಡಿಸಲಾಯಿತು. ಎಲ್.ಸಿ.ಆರ್.ಪಿ ಗೀತಾ ನಿರೂಪಣೆ ಮಾಡಿ ಪಶುಸಖಿ ಯಶೋದಾ ಧನ್ಯವಾದವಿತ್ತರು.

Related posts

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya
error: Content is protected !!