27.4 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ.11ರಂದು ಗ್ರಾ.ಪಂ. ಅಧ್ಯಕ್ಷೆ ಎನ್.ರಹಿಯಾನತ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಶುಪಾಲನಾ ಮತ್ತು ಪಶುಸಂಗೋಪನಾ ಇಲಾಖೆ ವೈದ್ಯಾಧಿಕಾರಿ ವಿಶ್ವನಾಥ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಪುಷ್ಪಾ, ಸದಸ್ಯರಾದ ಅನ್ವರ್ ಎನ್, ಅಬ್ದುಲ್ ರಜಾಕ್, ಶೇಖರ ಪೂಜಾರಿ, ಯಮುನಾ, ನೆಬಿಸಾ, ಕೆ.ಎಮ್. ಹಕೀಮ್ ಮತ್ತು ಅಸಿಮಾ , ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಮತ್ತು ಕೃಷಿ ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಸುಮಯ್ಯ ಸ್ವಾಗತಿಸಿ, ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ಶಾಪಿ ವಾರ್ಡ್ ಸಭೆಗಳ ಬೇಡಿಕೆ ವಾಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುಲಾಬಿ, ಗ್ರಾಮ ಆಡಳಿತ ಅಧಿಕಾರಿ ಸಾಕಮ್ಮ, ಪಿಆರ್ ಡಿ ಇಂಜಿನಿಯರ್ ಗಫೂರ್ ಸಾಬ್, ಶಿಕ್ಷಣ ಇಲಾಖೆ ಸಿಆರ್ ಪಿ ಶರೀಫ್ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!