31.9 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

ಮುಂಡಾಜೆ:ಕಳೆದ ವಾರವಷ್ಟೇ ನಿಡಿಗಲ್ ಹಳೇ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ‌.2000 ದಂಡ ವಿಧಿಸಿದ ಘಟನೆ ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ನಡೆದಿದ್ದು ಅಂಥದ್ದೇ ಘಟನೆ ಮತ್ತೆ ಮರುಕಳಿಸಿದೆ.

ಮಾ.11 ರಂದು ಬೆಳಗ್ಗಿನ ಹೊತ್ತು ನಿಡಿಗಲ್ ಹೊಸ ಸೇತುವೆಯ ಬಳಿ ತ್ಯಾಜ್ಯ ಕಂಡುಬಂದಿದ್ದು ಯಾರೋ ನದಿಯನ್ನು ಗುರಿಯಾಗಿಸಿ ಎಸೆದ ತ್ಯಾಜ್ಯವು ಸೇತುವೆಯ ಮೇಲೆ ಬಿದ್ದಿರುತ್ತದೆ. ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಕಸದ ಚೀಲವನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಕೆಲವು ದಾಖಲೆಗಳು ಸಿಕ್ಕಿದ್ದು ಅದು ಉಜಿರೆಯ ವ್ಯಕ್ತಿಗಳದ್ದೆಂದು ತಿಳಿದು ಬಂದಿದೆ.

ಕೂಡಲೇ ಅವರನ್ನು ದೂರವಾಣಿ ಮೂಲಕ ಸ್ಥಳಕ್ಕೆ ಕರೆಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ. 1000 ದಂಡ ವಿಧಿಸಿ ಎಚ್ಚರಿಕೆ ನೀಡಿದ ಮುಂಡಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya
error: Content is protected !!