22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

ಮುಂಡಾಜೆ:ಕಳೆದ ವಾರವಷ್ಟೇ ನಿಡಿಗಲ್ ಹಳೇ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ‌.2000 ದಂಡ ವಿಧಿಸಿದ ಘಟನೆ ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ನಡೆದಿದ್ದು ಅಂಥದ್ದೇ ಘಟನೆ ಮತ್ತೆ ಮರುಕಳಿಸಿದೆ.

ಮಾ.11 ರಂದು ಬೆಳಗ್ಗಿನ ಹೊತ್ತು ನಿಡಿಗಲ್ ಹೊಸ ಸೇತುವೆಯ ಬಳಿ ತ್ಯಾಜ್ಯ ಕಂಡುಬಂದಿದ್ದು ಯಾರೋ ನದಿಯನ್ನು ಗುರಿಯಾಗಿಸಿ ಎಸೆದ ತ್ಯಾಜ್ಯವು ಸೇತುವೆಯ ಮೇಲೆ ಬಿದ್ದಿರುತ್ತದೆ. ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಕಸದ ಚೀಲವನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಕೆಲವು ದಾಖಲೆಗಳು ಸಿಕ್ಕಿದ್ದು ಅದು ಉಜಿರೆಯ ವ್ಯಕ್ತಿಗಳದ್ದೆಂದು ತಿಳಿದು ಬಂದಿದೆ.

ಕೂಡಲೇ ಅವರನ್ನು ದೂರವಾಣಿ ಮೂಲಕ ಸ್ಥಳಕ್ಕೆ ಕರೆಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ. 1000 ದಂಡ ವಿಧಿಸಿ ಎಚ್ಚರಿಕೆ ನೀಡಿದ ಮುಂಡಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!