23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮಂದಿಗೆ ವರುಣ ಬಂದು ತಂಪೆರೆದಿದ್ದ ಈ ವರ್ಷದ ಮೊದಲ ಮಳೆ ಸುರಿದಿದೆ. ತಾಲೂಕಿನ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದ ಕ್ಷಣಗಳ ಕಂಡು ಬಂತು. ಮಾ.11 ರಂದು 41 ಡಿಗ್ರಿ:ಸಿ ತಾಪಮಾನವಿದ್ದು ಜನತೆ ಬಿಸಿಲ ಝಳಕ್ಕೆ ಬೆಂದು ಬಸವಳಿದಿದ್ದರು, ಮಾ.12 ರಂದು ಬಿಸಿಲ ತಾಪ ಅಧಿಕವಾಗಿತ್ತು ಆದರೆ ಸಂಜೆ ವೇಳೆ ವರುಣ ಕೃಪೆಯಿಂದ ಬಿಸಿಲ ಕಾವಿಗೆ ಬೆಂದಿದ್ದ ಇಳೆ, ಜನತೆಗೆ ಮಳೆಯ ಸಿಂಚನದಿಂದ ತಂಪೆರೆದಿದೆ. ಮಾ.12ರಂದು ಮೋಡ ಕವಿದ ವಾತವಾರಣ ತಾಲೂಕಿನ ನಾನಾ ಕಡೆಗಳಲ್ಲಿತ್ತು. ಜನರ ಮಳೆಯ ನೀರಿಕ್ಷೆಯನ್ನು ಆಪೇಕ್ಷಿಸುತ್ತಿದ್ದ ಘಟನೆಗಳು ಕಂಡು ಬಂತು.

ಬಿಸಿಲ ಕಾವು ಕೃಷಿ ಭೂಮಿಗೂ ವ್ಯಾಪಿಸಿ ಬಿಸಿಮುಟ್ಟಿಸಿತ್ತು. ಕೃಷಿಕ ಮೊದಲೇ ಲೋ ವಾಲ್ಟೆಜ್ ಬಾದೆಯಿಂದ ಕಂಗೆಟ್ಟು ಹೋಗಿದ್ದು ಇದರ ನಡುವೆ ಬಿಸಿಲ ಪ್ರತಪಕ್ಕೆ ಬೇಸತ್ತು ಹೋಗಿದ್ದರು. ವರುಣ ಆಗಮನದಿಂದ ಧರೆ ತಂಪೆರದ್ದಂತಾಗಿದೆ.

ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕಳೆಂಜ, ನೆರಿಯ, ಉಜಿರೆ ಗಡುಗು ಸಹಿತ ಗಾಳಿ ಮಳೆ ಸುರಿದಿದೆ. ಕೊಕ್ಕಡ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ. ಧರ್ಮಸ್ಥಳ ಭಾಗದಲ್ಲಿ ಅಲಿಕಲ್ಲು ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಸಂಜೆ ಹೊತ್ತಿಗೆ ಗಾಳಿ ಸಹಿತ ಸಡಿಲುನೊಂದಿಗೆ ಮಳೆಯಾಗಿದೆ.

Related posts

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya
error: Content is protected !!