27.4 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮಂದಿಗೆ ವರುಣ ಬಂದು ತಂಪೆರೆದಿದ್ದ ಈ ವರ್ಷದ ಮೊದಲ ಮಳೆ ಸುರಿದಿದೆ. ತಾಲೂಕಿನ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದ ಕ್ಷಣಗಳ ಕಂಡು ಬಂತು. ಮಾ.11 ರಂದು 41 ಡಿಗ್ರಿ:ಸಿ ತಾಪಮಾನವಿದ್ದು ಜನತೆ ಬಿಸಿಲ ಝಳಕ್ಕೆ ಬೆಂದು ಬಸವಳಿದಿದ್ದರು, ಮಾ.12 ರಂದು ಬಿಸಿಲ ತಾಪ ಅಧಿಕವಾಗಿತ್ತು ಆದರೆ ಸಂಜೆ ವೇಳೆ ವರುಣ ಕೃಪೆಯಿಂದ ಬಿಸಿಲ ಕಾವಿಗೆ ಬೆಂದಿದ್ದ ಇಳೆ, ಜನತೆಗೆ ಮಳೆಯ ಸಿಂಚನದಿಂದ ತಂಪೆರೆದಿದೆ. ಮಾ.12ರಂದು ಮೋಡ ಕವಿದ ವಾತವಾರಣ ತಾಲೂಕಿನ ನಾನಾ ಕಡೆಗಳಲ್ಲಿತ್ತು. ಜನರ ಮಳೆಯ ನೀರಿಕ್ಷೆಯನ್ನು ಆಪೇಕ್ಷಿಸುತ್ತಿದ್ದ ಘಟನೆಗಳು ಕಂಡು ಬಂತು.

ಬಿಸಿಲ ಕಾವು ಕೃಷಿ ಭೂಮಿಗೂ ವ್ಯಾಪಿಸಿ ಬಿಸಿಮುಟ್ಟಿಸಿತ್ತು. ಕೃಷಿಕ ಮೊದಲೇ ಲೋ ವಾಲ್ಟೆಜ್ ಬಾದೆಯಿಂದ ಕಂಗೆಟ್ಟು ಹೋಗಿದ್ದು ಇದರ ನಡುವೆ ಬಿಸಿಲ ಪ್ರತಪಕ್ಕೆ ಬೇಸತ್ತು ಹೋಗಿದ್ದರು. ವರುಣ ಆಗಮನದಿಂದ ಧರೆ ತಂಪೆರದ್ದಂತಾಗಿದೆ.

ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕಳೆಂಜ, ನೆರಿಯ, ಉಜಿರೆ ಗಡುಗು ಸಹಿತ ಗಾಳಿ ಮಳೆ ಸುರಿದಿದೆ. ಕೊಕ್ಕಡ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ. ಧರ್ಮಸ್ಥಳ ಭಾಗದಲ್ಲಿ ಅಲಿಕಲ್ಲು ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಸಂಜೆ ಹೊತ್ತಿಗೆ ಗಾಳಿ ಸಹಿತ ಸಡಿಲುನೊಂದಿಗೆ ಮಳೆಯಾಗಿದೆ.

Related posts

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!