23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮಂದಿಗೆ ವರುಣ ಬಂದು ತಂಪೆರೆದಿದ್ದ ಈ ವರ್ಷದ ಮೊದಲ ಮಳೆ ಸುರಿದಿದೆ. ತಾಲೂಕಿನ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದ ಕ್ಷಣಗಳ ಕಂಡು ಬಂತು. ಮಾ.11 ರಂದು 41 ಡಿಗ್ರಿ:ಸಿ ತಾಪಮಾನವಿದ್ದು ಜನತೆ ಬಿಸಿಲ ಝಳಕ್ಕೆ ಬೆಂದು ಬಸವಳಿದಿದ್ದರು, ಮಾ.12 ರಂದು ಬಿಸಿಲ ತಾಪ ಅಧಿಕವಾಗಿತ್ತು ಆದರೆ ಸಂಜೆ ವೇಳೆ ವರುಣ ಕೃಪೆಯಿಂದ ಬಿಸಿಲ ಕಾವಿಗೆ ಬೆಂದಿದ್ದ ಇಳೆ, ಜನತೆಗೆ ಮಳೆಯ ಸಿಂಚನದಿಂದ ತಂಪೆರೆದಿದೆ. ಮಾ.12ರಂದು ಮೋಡ ಕವಿದ ವಾತವಾರಣ ತಾಲೂಕಿನ ನಾನಾ ಕಡೆಗಳಲ್ಲಿತ್ತು. ಜನರ ಮಳೆಯ ನೀರಿಕ್ಷೆಯನ್ನು ಆಪೇಕ್ಷಿಸುತ್ತಿದ್ದ ಘಟನೆಗಳು ಕಂಡು ಬಂತು.

ಬಿಸಿಲ ಕಾವು ಕೃಷಿ ಭೂಮಿಗೂ ವ್ಯಾಪಿಸಿ ಬಿಸಿಮುಟ್ಟಿಸಿತ್ತು. ಕೃಷಿಕ ಮೊದಲೇ ಲೋ ವಾಲ್ಟೆಜ್ ಬಾದೆಯಿಂದ ಕಂಗೆಟ್ಟು ಹೋಗಿದ್ದು ಇದರ ನಡುವೆ ಬಿಸಿಲ ಪ್ರತಪಕ್ಕೆ ಬೇಸತ್ತು ಹೋಗಿದ್ದರು. ವರುಣ ಆಗಮನದಿಂದ ಧರೆ ತಂಪೆರದ್ದಂತಾಗಿದೆ.

ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕಳೆಂಜ, ನೆರಿಯ, ಉಜಿರೆ ಗಡುಗು ಸಹಿತ ಗಾಳಿ ಮಳೆ ಸುರಿದಿದೆ. ಕೊಕ್ಕಡ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ. ಧರ್ಮಸ್ಥಳ ಭಾಗದಲ್ಲಿ ಅಲಿಕಲ್ಲು ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಸಂಜೆ ಹೊತ್ತಿಗೆ ಗಾಳಿ ಸಹಿತ ಸಡಿಲುನೊಂದಿಗೆ ಮಳೆಯಾಗಿದೆ.

Related posts

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!