26.1 C
ಪುತ್ತೂರು, ಬೆಳ್ತಂಗಡಿ
April 30, 2025
Uncategorized

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

ಬೆಳ್ತಂಗಡಿ: ಮಾ.15ರಂದು ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ದ.ಕ.ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ತಾಲೂಕು ಅಭಿಯಾನ ನಿರ್ವಹಣಾ ಘಟಕ, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹಾಗೂ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇವುಗಳ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿರುವುದಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಾಲೂಕಿನ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸುವಂತೆ ವಿನಂತಿಸಿದ್ದಾರೆ.

Related posts

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya
error: Content is protected !!