41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್ ಚೆಯರ್ ಅನ್ನು ನಡ ಕಾರ್ಯಕ್ಷೇತ್ರದ ಚಂದನ ಸ್ವ-ಸಹಾಯ ಸಂಘದ ಸದಸ್ಯರಾದ ಅಬ್ದುಲ್ ಹಮೀದ್ ರವರ ತಾಯಿ ಝುಬೈದಾರವರಿಗೆ ವಿತರಿಸಲಾಯಿತು.

ಆರೋಗ್ಯ ಸಮಸ್ಯೆಯಿಂದಾಗಿ ನಡೆದಾಡಲು ಅಸಾಧ್ಯವಾಗಿರುದನ್ನು ಗಮನಿಸಿ ಯೋಜನೆಯ ವತಿಯಿಂದ ಮಂಜೂರಾಗಿರುವ ವೀಲ್ ಚಯರ್ ಅನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು.

ಈ ಸಂದರ್ಭ ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ರತ್ನಾಕರ್,ಊರಿನ ಗಣ್ಯರಾದ ಶ್ಯಾಮ್ ಸುಂದರ್ , ಶ್ರೀಮತಿ ಪ್ರೇಮ ಆರ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಉಮೈರಾಬಾನು, ಶ್ರೀಮತಿ ಶಶಿಕಲಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಸ್ಥಳೀಯರಾದ ಅಬ್ದುಲ್ ಗಫುರ್ ಸಾಹೇಬ್, ಸಾಬ್ ಜಾನ್ ಸಾಹೇಬ್, ಹಾಗೂ ಸೇವಾಪ್ರತಿನಿಧಿಗಳಾದ ಶ್ರೀಮತಿ ಪುಷ್ಪ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು.

Related posts

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya
error: Content is protected !!