ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್ ಚೆಯರ್ ಅನ್ನು ನಡ ಕಾರ್ಯಕ್ಷೇತ್ರದ ಚಂದನ ಸ್ವ-ಸಹಾಯ ಸಂಘದ ಸದಸ್ಯರಾದ ಅಬ್ದುಲ್ ಹಮೀದ್ ರವರ ತಾಯಿ ಝುಬೈದಾರವರಿಗೆ ವಿತರಿಸಲಾಯಿತು.

ಆರೋಗ್ಯ ಸಮಸ್ಯೆಯಿಂದಾಗಿ ನಡೆದಾಡಲು ಅಸಾಧ್ಯವಾಗಿರುದನ್ನು ಗಮನಿಸಿ ಯೋಜನೆಯ ವತಿಯಿಂದ ಮಂಜೂರಾಗಿರುವ ವೀಲ್ ಚಯರ್ ಅನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು.

ಈ ಸಂದರ್ಭ ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ರತ್ನಾಕರ್,ಊರಿನ ಗಣ್ಯರಾದ ಶ್ಯಾಮ್ ಸುಂದರ್ , ಶ್ರೀಮತಿ ಪ್ರೇಮ ಆರ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಉಮೈರಾಬಾನು, ಶ್ರೀಮತಿ ಶಶಿಕಲಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಸ್ಥಳೀಯರಾದ ಅಬ್ದುಲ್ ಗಫುರ್ ಸಾಹೇಬ್, ಸಾಬ್ ಜಾನ್ ಸಾಹೇಬ್, ಹಾಗೂ ಸೇವಾಪ್ರತಿನಿಧಿಗಳಾದ ಶ್ರೀಮತಿ ಪುಷ್ಪ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya
error: Content is protected !!