September 6, 2026
Uncategorized

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

ಕೊಯ್ಯೂರು : ಕೊಯ್ಯೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರಸ್ತಿ ಗಾಗಿ 50 ಸಾವಿರ ದೇಣಿಗೆಯನ್ನು ಮಾ.12 ರಂದು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ವಲಯ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊಯ್ಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಗೌಡರಿಗೆ ಹಸ್ತಾಂತರ ಮಾಡಿದರು.
ಯೋಜನಾ ಕೃಷಿ ಅಧಿಕಾರಿ ರಾಮ್ ಕುಮಾರ್, ಕೊಯ್ಯೂರು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ ಬೆರ್ಕೆ,ಉಪಾಧ್ಯಕ್ಷ ರಾಮಣ್ಣ ಗೌಡ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ದಾಮೋಧರ ಗೌಡ ಬೆರ್ಕೆ,ಶಾಲಾ ಪೋಷಕಪಾದ ಶಿವಪ್ಪ ಗೌಡ, ಓಬಯ್ಯ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜಾರಪ್ಪ ಗೌಡ ಬೇರ್ಕೆ,ಮುಖ್ಯ ಶಿಕ್ಷಕಿ ಜಯಶ್ರೀ, ಸಹ ಶಿಕ್ಷಕರಾದ ಸೌಮ್ಯ, ದೀಪಿಕಾ ಟಿ,ಸೇವಾ ಪ್ರತಿ‍ ಕುಸುಮಾವತಿ,ಮೇಲುಸ್ತುವಾರಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಮತ್ತಿತರ ರಿದ್ದರು.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!