33.2 C
ಪುತ್ತೂರು, ಬೆಳ್ತಂಗಡಿ
March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

ಬೆಳ್ತಂಗಡಿ : ಉತ್ತರ ಕರ್ನಾಟಕ ಜಿಲ್ಲೆಗಳಿಂದ ಬೆಳ್ತಂಗಡಿ ತಾಲೂಕಿನ ನಾಗರಿಕರಿಗೆ ಚಿನ್ನ/ ಹಳೆಯ ಕಾಲದ ನಿಧಿ ಇದೆ ಬನ್ನಿ ಎಂಬ ಕರೆಗಳು ಹಲವು ದಿನಗಳಿಂದ ಬರುತ್ತಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯು ಇಂತಹ ಕರೆ ಮಾಡುವವರ ವಿರುದ್ಧವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾ.11 ರಂದು ದೂರು ನೀಡಲಾಯಿತು.

ತಾಲೂಕಿನ ಹಲವು ವ್ಯಕ್ತಿಗಳಿಗೆ ಇಂತಹ ಕರೆಗಳು ನಿರಂತರವಾಗಿ ಬರುತ್ತಿದ್ದು, ಇದರ ಹಿಂದೆ ದೊಡ್ಡ ಮಾಫಿಯಾ ಕೆಲಸ ಮಾಡುತ್ತಿರುವ ಅನುಮಾನ ಕಾಡುತ್ತಿದೆ. ಕಳೆದ ವರ್ಷ ಬೆಳ್ತಂಗಡಿ 3 ಜನರನ್ನು ಚಿನ್ನ ನೀಡುವ ನೆಪದಲ್ಲಿ ತುಮಕೂರಿನಲ್ಲಿ ಬರ್ಬರ ಕೊಲೆ ಮಾಡಿ ಸುಟ್ಟುಹಾಕಿರುವ ಘಟನೆ ನಮ್ಮ ಕಣ್ಣ ಮುಂದೆ ಇರುವಾಗಲೇ ಈ ರೀತಿಯ ಕರೆಗಳು ಬರುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಎಡೆಮಾಡಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಮುತುವರ್ಜಿ ವಹಿಸಿ ಕೂಡಲೇ ಉನ್ನತ ಮಟ್ಟದಲ್ಲಿ ತನಿಖೆ ನಡೆಸಿ, ಜಾಲದ ಹಿಂದೆ ಯಾರೆಲ್ಲ ಭಾಗಿಯಾಗಿದ್ದಾರೆ ಎಲ್ಲಾ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಂಡು ಶಿಕ್ಷೆಗೆ ಒಳಪಡಿಸಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಮುಖಂಡರುಗಳಾದ ರಶೀದ್ ಬೆಳ್ತಂಗಡಿ, ಸ್ವಾಲಿಹ್ ಮದ್ದಡ್ಕ, ಅಶ್ರಫ್ ಕಟ್ಟೆ, ಬಶೀರ್ ಕೊಯ್ಯೂರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!