25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮಂದಿಗೆ ವರುಣ ಬಂದು ತಂಪೆರೆದಿದ್ದ ಈ ವರ್ಷದ ಮೊದಲ ಮಳೆ ಸುರಿದಿದೆ. ತಾಲೂಕಿನ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದ ಕ್ಷಣಗಳ ಕಂಡು ಬಂತು. ಮಾ.11 ರಂದು 41 ಡಿಗ್ರಿ:ಸಿ ತಾಪಮಾನವಿದ್ದು ಜನತೆ ಬಿಸಿಲ ಝಳಕ್ಕೆ ಬೆಂದು ಬಸವಳಿದಿದ್ದರು, ಮಾ.12 ರಂದು ಬಿಸಿಲ ತಾಪ ಅಧಿಕವಾಗಿತ್ತು ಆದರೆ ಸಂಜೆ ವೇಳೆ ವರುಣ ಕೃಪೆಯಿಂದ ಬಿಸಿಲ ಕಾವಿಗೆ ಬೆಂದಿದ್ದ ಇಳೆ, ಜನತೆಗೆ ಮಳೆಯ ಸಿಂಚನದಿಂದ ತಂಪೆರೆದಿದೆ. ಮಾ.12ರಂದು ಮೋಡ ಕವಿದ ವಾತವಾರಣ ತಾಲೂಕಿನ ನಾನಾ ಕಡೆಗಳಲ್ಲಿತ್ತು. ಜನರ ಮಳೆಯ ನೀರಿಕ್ಷೆಯನ್ನು ಆಪೇಕ್ಷಿಸುತ್ತಿದ್ದ ಘಟನೆಗಳು ಕಂಡು ಬಂತು.

ಬಿಸಿಲ ಕಾವು ಕೃಷಿ ಭೂಮಿಗೂ ವ್ಯಾಪಿಸಿ ಬಿಸಿಮುಟ್ಟಿಸಿತ್ತು. ಕೃಷಿಕ ಮೊದಲೇ ಲೋ ವಾಲ್ಟೆಜ್ ಬಾದೆಯಿಂದ ಕಂಗೆಟ್ಟು ಹೋಗಿದ್ದು ಇದರ ನಡುವೆ ಬಿಸಿಲ ಪ್ರತಪಕ್ಕೆ ಬೇಸತ್ತು ಹೋಗಿದ್ದರು. ವರುಣ ಆಗಮನದಿಂದ ಧರೆ ತಂಪೆರದ್ದಂತಾಗಿದೆ.

ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕಳೆಂಜ, ನೆರಿಯ, ಉಜಿರೆ ಗಡುಗು ಸಹಿತ ಗಾಳಿ ಮಳೆ ಸುರಿದಿದೆ. ಕೊಕ್ಕಡ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ. ಧರ್ಮಸ್ಥಳ ಭಾಗದಲ್ಲಿ ಅಲಿಕಲ್ಲು ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಸಂಜೆ ಹೊತ್ತಿಗೆ ಗಾಳಿ ಸಹಿತ ಸಡಿಲುನೊಂದಿಗೆ ಮಳೆಯಾಗಿದೆ.

Related posts

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!