July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮಂದಿಗೆ ವರುಣ ಬಂದು ತಂಪೆರೆದಿದ್ದ ಈ ವರ್ಷದ ಮೊದಲ ಮಳೆ ಸುರಿದಿದೆ. ತಾಲೂಕಿನ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದ ಕ್ಷಣಗಳ ಕಂಡು ಬಂತು. ಮಾ.11 ರಂದು 41 ಡಿಗ್ರಿ:ಸಿ ತಾಪಮಾನವಿದ್ದು ಜನತೆ ಬಿಸಿಲ ಝಳಕ್ಕೆ ಬೆಂದು ಬಸವಳಿದಿದ್ದರು, ಮಾ.12 ರಂದು ಬಿಸಿಲ ತಾಪ ಅಧಿಕವಾಗಿತ್ತು ಆದರೆ ಸಂಜೆ ವೇಳೆ ವರುಣ ಕೃಪೆಯಿಂದ ಬಿಸಿಲ ಕಾವಿಗೆ ಬೆಂದಿದ್ದ ಇಳೆ, ಜನತೆಗೆ ಮಳೆಯ ಸಿಂಚನದಿಂದ ತಂಪೆರೆದಿದೆ. ಮಾ.12ರಂದು ಮೋಡ ಕವಿದ ವಾತವಾರಣ ತಾಲೂಕಿನ ನಾನಾ ಕಡೆಗಳಲ್ಲಿತ್ತು. ಜನರ ಮಳೆಯ ನೀರಿಕ್ಷೆಯನ್ನು ಆಪೇಕ್ಷಿಸುತ್ತಿದ್ದ ಘಟನೆಗಳು ಕಂಡು ಬಂತು.

ಬಿಸಿಲ ಕಾವು ಕೃಷಿ ಭೂಮಿಗೂ ವ್ಯಾಪಿಸಿ ಬಿಸಿಮುಟ್ಟಿಸಿತ್ತು. ಕೃಷಿಕ ಮೊದಲೇ ಲೋ ವಾಲ್ಟೆಜ್ ಬಾದೆಯಿಂದ ಕಂಗೆಟ್ಟು ಹೋಗಿದ್ದು ಇದರ ನಡುವೆ ಬಿಸಿಲ ಪ್ರತಪಕ್ಕೆ ಬೇಸತ್ತು ಹೋಗಿದ್ದರು. ವರುಣ ಆಗಮನದಿಂದ ಧರೆ ತಂಪೆರದ್ದಂತಾಗಿದೆ.

ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕಳೆಂಜ, ನೆರಿಯ, ಉಜಿರೆ ಗಡುಗು ಸಹಿತ ಗಾಳಿ ಮಳೆ ಸುರಿದಿದೆ. ಕೊಕ್ಕಡ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ. ಧರ್ಮಸ್ಥಳ ಭಾಗದಲ್ಲಿ ಅಲಿಕಲ್ಲು ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಸಂಜೆ ಹೊತ್ತಿಗೆ ಗಾಳಿ ಸಹಿತ ಸಡಿಲುನೊಂದಿಗೆ ಮಳೆಯಾಗಿದೆ.

Related posts

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!