ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮಂದಿಗೆ ವರುಣ ಬಂದು ತಂಪೆರೆದಿದ್ದ ಈ ವರ್ಷದ ಮೊದಲ ಮಳೆ ಸುರಿದಿದೆ. ತಾಲೂಕಿನ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದ ಕ್ಷಣಗಳ ಕಂಡು ಬಂತು. ಮಾ.11 ರಂದು 41 ಡಿಗ್ರಿ:ಸಿ ತಾಪಮಾನವಿದ್ದು ಜನತೆ ಬಿಸಿಲ ಝಳಕ್ಕೆ ಬೆಂದು ಬಸವಳಿದಿದ್ದರು, ಮಾ.12 ರಂದು ಬಿಸಿಲ ತಾಪ ಅಧಿಕವಾಗಿತ್ತು ಆದರೆ ಸಂಜೆ ವೇಳೆ ವರುಣ ಕೃಪೆಯಿಂದ ಬಿಸಿಲ ಕಾವಿಗೆ ಬೆಂದಿದ್ದ ಇಳೆ, ಜನತೆಗೆ ಮಳೆಯ ಸಿಂಚನದಿಂದ ತಂಪೆರೆದಿದೆ. ಮಾ.12ರಂದು ಮೋಡ ಕವಿದ ವಾತವಾರಣ ತಾಲೂಕಿನ ನಾನಾ ಕಡೆಗಳಲ್ಲಿತ್ತು. ಜನರ ಮಳೆಯ ನೀರಿಕ್ಷೆಯನ್ನು ಆಪೇಕ್ಷಿಸುತ್ತಿದ್ದ ಘಟನೆಗಳು ಕಂಡು ಬಂತು.

ಬಿಸಿಲ ಕಾವು ಕೃಷಿ ಭೂಮಿಗೂ ವ್ಯಾಪಿಸಿ ಬಿಸಿಮುಟ್ಟಿಸಿತ್ತು. ಕೃಷಿಕ ಮೊದಲೇ ಲೋ ವಾಲ್ಟೆಜ್ ಬಾದೆಯಿಂದ ಕಂಗೆಟ್ಟು ಹೋಗಿದ್ದು ಇದರ ನಡುವೆ ಬಿಸಿಲ ಪ್ರತಪಕ್ಕೆ ಬೇಸತ್ತು ಹೋಗಿದ್ದರು. ವರುಣ ಆಗಮನದಿಂದ ಧರೆ ತಂಪೆರದ್ದಂತಾಗಿದೆ.

ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕಳೆಂಜ, ನೆರಿಯ, ಉಜಿರೆ ಗಡುಗು ಸಹಿತ ಗಾಳಿ ಮಳೆ ಸುರಿದಿದೆ. ಕೊಕ್ಕಡ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ. ಧರ್ಮಸ್ಥಳ ಭಾಗದಲ್ಲಿ ಅಲಿಕಲ್ಲು ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಸಂಜೆ ಹೊತ್ತಿಗೆ ಗಾಳಿ ಸಹಿತ ಸಡಿಲುನೊಂದಿಗೆ ಮಳೆಯಾಗಿದೆ.

Related posts

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya
error: Content is protected !!