25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮಂದಿಗೆ ವರುಣ ಬಂದು ತಂಪೆರೆದಿದ್ದ ಈ ವರ್ಷದ ಮೊದಲ ಮಳೆ ಸುರಿದಿದೆ. ತಾಲೂಕಿನ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದ ಕ್ಷಣಗಳ ಕಂಡು ಬಂತು. ಮಾ.11 ರಂದು 41 ಡಿಗ್ರಿ:ಸಿ ತಾಪಮಾನವಿದ್ದು ಜನತೆ ಬಿಸಿಲ ಝಳಕ್ಕೆ ಬೆಂದು ಬಸವಳಿದಿದ್ದರು, ಮಾ.12 ರಂದು ಬಿಸಿಲ ತಾಪ ಅಧಿಕವಾಗಿತ್ತು ಆದರೆ ಸಂಜೆ ವೇಳೆ ವರುಣ ಕೃಪೆಯಿಂದ ಬಿಸಿಲ ಕಾವಿಗೆ ಬೆಂದಿದ್ದ ಇಳೆ, ಜನತೆಗೆ ಮಳೆಯ ಸಿಂಚನದಿಂದ ತಂಪೆರೆದಿದೆ. ಮಾ.12ರಂದು ಮೋಡ ಕವಿದ ವಾತವಾರಣ ತಾಲೂಕಿನ ನಾನಾ ಕಡೆಗಳಲ್ಲಿತ್ತು. ಜನರ ಮಳೆಯ ನೀರಿಕ್ಷೆಯನ್ನು ಆಪೇಕ್ಷಿಸುತ್ತಿದ್ದ ಘಟನೆಗಳು ಕಂಡು ಬಂತು.

ಬಿಸಿಲ ಕಾವು ಕೃಷಿ ಭೂಮಿಗೂ ವ್ಯಾಪಿಸಿ ಬಿಸಿಮುಟ್ಟಿಸಿತ್ತು. ಕೃಷಿಕ ಮೊದಲೇ ಲೋ ವಾಲ್ಟೆಜ್ ಬಾದೆಯಿಂದ ಕಂಗೆಟ್ಟು ಹೋಗಿದ್ದು ಇದರ ನಡುವೆ ಬಿಸಿಲ ಪ್ರತಪಕ್ಕೆ ಬೇಸತ್ತು ಹೋಗಿದ್ದರು. ವರುಣ ಆಗಮನದಿಂದ ಧರೆ ತಂಪೆರದ್ದಂತಾಗಿದೆ.

ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕಳೆಂಜ, ನೆರಿಯ, ಉಜಿರೆ ಗಡುಗು ಸಹಿತ ಗಾಳಿ ಮಳೆ ಸುರಿದಿದೆ. ಕೊಕ್ಕಡ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ. ಧರ್ಮಸ್ಥಳ ಭಾಗದಲ್ಲಿ ಅಲಿಕಲ್ಲು ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಸಂಜೆ ಹೊತ್ತಿಗೆ ಗಾಳಿ ಸಹಿತ ಸಡಿಲುನೊಂದಿಗೆ ಮಳೆಯಾಗಿದೆ.

Related posts

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya
error: Content is protected !!