23.7 C
ಪುತ್ತೂರು, ಬೆಳ್ತಂಗಡಿ
June 15, 2025
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದ ವಾರ್ಷಿಕೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮ ಪೂಜ್ಯ ಸ್ವಸ್ತಿಶ್ರೀ ಸೌರಭಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಸಂಸ್ಥಾನ ಮಠ ತಿಜಾರ ರಾಜಸ್ಥಾನ ಇವರ ಪಾವನ ಸಾನಿಧ್ಯ ಹಾಗೂ ಮಾರ್ಗ ದರ್ಶನದೊಂದಿಗೆ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತ್ರಶ್ರೀ ಹೇಮಾವತಿ ವಿ. ಹೆಗ್ಗಡೆ ಯವರ ಮಾರ್ಗದರ್ಶನ ದೊಂದಿಗೆ ಊರ ಪರವೂರ ಸಹದಯಿ ಧರ್ಮಾಭಿಮಾನಿ ಸರ್ಮ ಬಂಧುಗಳ ಸಹಕಾರದೊಂದಿಗೆ ಮಾ.೧೧ ರಂದು ವಿಜೃಂಭಣೆಯಿಂದ ವಾರ್ಷಿಕೋತ್ಸವ ಹಾಗೂ ಶಾಂತಿ ಚಕ್ರ ಆರಾಧನೆ, ಪದ್ಮಾವತಿ ಅಮ್ಮನವರ ಆರಾಧನ, ಲಕ್ಷ ಹೂವಿನ ಪೂಜೆ, ೨೪ ಕಲಶಾಭಿಷೇಕ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಪ್ರತಿಷ್ಠಾ ಪುರೋಹಿತರಾದ ಜಯರಾಜ್ ಇಂದ್ರ ಮತ್ತು ಅರಹಂತ ಇಂದ್ರ ಹಾಗೂ ತಂಡದವರಿಂದ ಜರುಗಿತು.

ಈ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ಆಡಳಿತ ಮಂಡಳಿ ಸದಸ್ಯರಾದ ಎಚ್. ವಿಜಯ ಕುಮಾರ್, ಶ್ರೀಮತಿ ಮನೋರಮಾ, ಶ್ರೀಮತಿ ವಿಮಲ, ಅಜಿತ್ ಕುಮಾರ್, ಶ್ರೀಮತಿ ಶೋಭಾ, ಶ್ರೀಮತಿ ಚಂದನಾ, ಸುಮಂತ್ ಜೈನ್ ಮುಂತಾದವರನ್ನು ಸ್ವಾಮೀಜಿಯವರು ಅಭಿನಂದಿಸಿ ಆಶಿರ್ವದಿಸಿದರು. ಸ್ವಾಮೀಜಿಯವರು ಮಾತನಾಡುತ್ತಾ ಶ್ರೀ ಕ್ಷೇತ್ರ ಚಂದ್ರಪುರವು ಅತೀ ಪ್ರಾಚೀನವಾದ ಕ್ಷೇತ್ರವಾಗಿದ್ದು ಈ ಕ್ಷೇತ್ರವು ಅತಿಶಯವಾಗಿರುತ್ತದೆ. ಈ ಕ್ಷೇತ್ರ ದರ್ಶನ ಮಾಡಿದವರ ಪಾಪವು ನಾಶವಾಗಿ ಪುಣ್ಯ ಪ್ರಾಪ್ತಿಯಾಗುತ್ತದೆ. ಕ್ಷೇತ್ರದಲ್ಲಿ ನಿರಂತರವಾಗಿ ಆರಾಧನೆಗಳು, ಪೂಜೆಗಳು ನಡೆದು ಲೋಕ ಕಲ್ಯಾಣವಾಗಲಿ. ಈ ಕ್ಷೇತ್ರಕ್ಕೆ ಇನ್ನೊಮ್ಮೆ ಭೇಟಿ ನೀಡಿ ಈ ಕ್ಷೇತ್ರದಲ್ಲಿ ಎರಡು ದಿನ ಇದ್ದು ಧಾರ್ಮಿಕ ಕಾರ್ಯಕ್ರಮ ನಡೆಸುವುದಾಗಿ ಆಶೀರ್ವಚನ ನೀಡಿದರು. ಸಮಿತಿಯ ಸಂಚಾಲಕರಾದ ಡಾ. ಕೆ. ಜಯಕೀರ್ತಿ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya
error: Content is protected !!