ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್ ಚೆಯರ್ ಅನ್ನು ನಡ ಕಾರ್ಯಕ್ಷೇತ್ರದ ಚಂದನ ಸ್ವ-ಸಹಾಯ ಸಂಘದ ಸದಸ್ಯರಾದ ಅಬ್ದುಲ್ ಹಮೀದ್ ರವರ ತಾಯಿ ಝುಬೈದಾರವರಿಗೆ ವಿತರಿಸಲಾಯಿತು.

ಆರೋಗ್ಯ ಸಮಸ್ಯೆಯಿಂದಾಗಿ ನಡೆದಾಡಲು ಅಸಾಧ್ಯವಾಗಿರುದನ್ನು ಗಮನಿಸಿ ಯೋಜನೆಯ ವತಿಯಿಂದ ಮಂಜೂರಾಗಿರುವ ವೀಲ್ ಚಯರ್ ಅನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು.

ಈ ಸಂದರ್ಭ ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ರತ್ನಾಕರ್,ಊರಿನ ಗಣ್ಯರಾದ ಶ್ಯಾಮ್ ಸುಂದರ್ , ಶ್ರೀಮತಿ ಪ್ರೇಮ ಆರ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಉಮೈರಾಬಾನು, ಶ್ರೀಮತಿ ಶಶಿಕಲಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಸ್ಥಳೀಯರಾದ ಅಬ್ದುಲ್ ಗಫುರ್ ಸಾಹೇಬ್, ಸಾಬ್ ಜಾನ್ ಸಾಹೇಬ್, ಹಾಗೂ ಸೇವಾಪ್ರತಿನಿಧಿಗಳಾದ ಶ್ರೀಮತಿ ಪುಷ್ಪ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!