July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್ ಚೆಯರ್ ಅನ್ನು ನಡ ಕಾರ್ಯಕ್ಷೇತ್ರದ ಚಂದನ ಸ್ವ-ಸಹಾಯ ಸಂಘದ ಸದಸ್ಯರಾದ ಅಬ್ದುಲ್ ಹಮೀದ್ ರವರ ತಾಯಿ ಝುಬೈದಾರವರಿಗೆ ವಿತರಿಸಲಾಯಿತು.

ಆರೋಗ್ಯ ಸಮಸ್ಯೆಯಿಂದಾಗಿ ನಡೆದಾಡಲು ಅಸಾಧ್ಯವಾಗಿರುದನ್ನು ಗಮನಿಸಿ ಯೋಜನೆಯ ವತಿಯಿಂದ ಮಂಜೂರಾಗಿರುವ ವೀಲ್ ಚಯರ್ ಅನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು.

ಈ ಸಂದರ್ಭ ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ರತ್ನಾಕರ್,ಊರಿನ ಗಣ್ಯರಾದ ಶ್ಯಾಮ್ ಸುಂದರ್ , ಶ್ರೀಮತಿ ಪ್ರೇಮ ಆರ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಉಮೈರಾಬಾನು, ಶ್ರೀಮತಿ ಶಶಿಕಲಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಸ್ಥಳೀಯರಾದ ಅಬ್ದುಲ್ ಗಫುರ್ ಸಾಹೇಬ್, ಸಾಬ್ ಜಾನ್ ಸಾಹೇಬ್, ಹಾಗೂ ಸೇವಾಪ್ರತಿನಿಧಿಗಳಾದ ಶ್ರೀಮತಿ ಪುಷ್ಪ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು.

Related posts

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya
error: Content is protected !!