23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

ಬೆಳ್ತಂಗಡಿ : ಉತ್ತರ ಕರ್ನಾಟಕ ಜಿಲ್ಲೆಗಳಿಂದ ಬೆಳ್ತಂಗಡಿ ತಾಲೂಕಿನ ನಾಗರಿಕರಿಗೆ ಚಿನ್ನ/ ಹಳೆಯ ಕಾಲದ ನಿಧಿ ಇದೆ ಬನ್ನಿ ಎಂಬ ಕರೆಗಳು ಹಲವು ದಿನಗಳಿಂದ ಬರುತ್ತಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯು ಇಂತಹ ಕರೆ ಮಾಡುವವರ ವಿರುದ್ಧವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾ.11 ರಂದು ದೂರು ನೀಡಲಾಯಿತು.

ತಾಲೂಕಿನ ಹಲವು ವ್ಯಕ್ತಿಗಳಿಗೆ ಇಂತಹ ಕರೆಗಳು ನಿರಂತರವಾಗಿ ಬರುತ್ತಿದ್ದು, ಇದರ ಹಿಂದೆ ದೊಡ್ಡ ಮಾಫಿಯಾ ಕೆಲಸ ಮಾಡುತ್ತಿರುವ ಅನುಮಾನ ಕಾಡುತ್ತಿದೆ. ಕಳೆದ ವರ್ಷ ಬೆಳ್ತಂಗಡಿ 3 ಜನರನ್ನು ಚಿನ್ನ ನೀಡುವ ನೆಪದಲ್ಲಿ ತುಮಕೂರಿನಲ್ಲಿ ಬರ್ಬರ ಕೊಲೆ ಮಾಡಿ ಸುಟ್ಟುಹಾಕಿರುವ ಘಟನೆ ನಮ್ಮ ಕಣ್ಣ ಮುಂದೆ ಇರುವಾಗಲೇ ಈ ರೀತಿಯ ಕರೆಗಳು ಬರುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಎಡೆಮಾಡಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಮುತುವರ್ಜಿ ವಹಿಸಿ ಕೂಡಲೇ ಉನ್ನತ ಮಟ್ಟದಲ್ಲಿ ತನಿಖೆ ನಡೆಸಿ, ಜಾಲದ ಹಿಂದೆ ಯಾರೆಲ್ಲ ಭಾಗಿಯಾಗಿದ್ದಾರೆ ಎಲ್ಲಾ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಂಡು ಶಿಕ್ಷೆಗೆ ಒಳಪಡಿಸಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಮುಖಂಡರುಗಳಾದ ರಶೀದ್ ಬೆಳ್ತಂಗಡಿ, ಸ್ವಾಲಿಹ್ ಮದ್ದಡ್ಕ, ಅಶ್ರಫ್ ಕಟ್ಟೆ, ಬಶೀರ್ ಕೊಯ್ಯೂರು ಉಪಸ್ಥಿತರಿದ್ದರು.

Related posts

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya
error: Content is protected !!