23.5 C
ಪುತ್ತೂರು, ಬೆಳ್ತಂಗಡಿ
March 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮಂದಿಗೆ ವರುಣ ಬಂದು ತಂಪೆರೆದಿದ್ದ ಈ ವರ್ಷದ ಮೊದಲ ಮಳೆ ಸುರಿದಿದೆ. ತಾಲೂಕಿನ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದ ಕ್ಷಣಗಳ ಕಂಡು ಬಂತು. ಮಾ.11 ರಂದು 41 ಡಿಗ್ರಿ:ಸಿ ತಾಪಮಾನವಿದ್ದು ಜನತೆ ಬಿಸಿಲ ಝಳಕ್ಕೆ ಬೆಂದು ಬಸವಳಿದಿದ್ದರು, ಮಾ.12 ರಂದು ಬಿಸಿಲ ತಾಪ ಅಧಿಕವಾಗಿತ್ತು ಆದರೆ ಸಂಜೆ ವೇಳೆ ವರುಣ ಕೃಪೆಯಿಂದ ಬಿಸಿಲ ಕಾವಿಗೆ ಬೆಂದಿದ್ದ ಇಳೆ, ಜನತೆಗೆ ಮಳೆಯ ಸಿಂಚನದಿಂದ ತಂಪೆರೆದಿದೆ. ಮಾ.12ರಂದು ಮೋಡ ಕವಿದ ವಾತವಾರಣ ತಾಲೂಕಿನ ನಾನಾ ಕಡೆಗಳಲ್ಲಿತ್ತು. ಜನರ ಮಳೆಯ ನೀರಿಕ್ಷೆಯನ್ನು ಆಪೇಕ್ಷಿಸುತ್ತಿದ್ದ ಘಟನೆಗಳು ಕಂಡು ಬಂತು.

ಬಿಸಿಲ ಕಾವು ಕೃಷಿ ಭೂಮಿಗೂ ವ್ಯಾಪಿಸಿ ಬಿಸಿಮುಟ್ಟಿಸಿತ್ತು. ಕೃಷಿಕ ಮೊದಲೇ ಲೋ ವಾಲ್ಟೆಜ್ ಬಾದೆಯಿಂದ ಕಂಗೆಟ್ಟು ಹೋಗಿದ್ದು ಇದರ ನಡುವೆ ಬಿಸಿಲ ಪ್ರತಪಕ್ಕೆ ಬೇಸತ್ತು ಹೋಗಿದ್ದರು. ವರುಣ ಆಗಮನದಿಂದ ಧರೆ ತಂಪೆರದ್ದಂತಾಗಿದೆ.

ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕಳೆಂಜ, ನೆರಿಯ, ಉಜಿರೆ ಗಡುಗು ಸಹಿತ ಗಾಳಿ ಮಳೆ ಸುರಿದಿದೆ. ಕೊಕ್ಕಡ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ. ಧರ್ಮಸ್ಥಳ ಭಾಗದಲ್ಲಿ ಅಲಿಕಲ್ಲು ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಸಂಜೆ ಹೊತ್ತಿಗೆ ಗಾಳಿ ಸಹಿತ ಸಡಿಲುನೊಂದಿಗೆ ಮಳೆಯಾಗಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya
error: Content is protected !!