30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

ಬೆಳ್ತಂಗಡಿ: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮಂದಿಗೆ ವರುಣ ಬಂದು ತಂಪೆರೆದಿದ್ದ ಈ ವರ್ಷದ ಮೊದಲ ಮಳೆ ಸುರಿದಿದೆ. ತಾಲೂಕಿನ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದ ಕ್ಷಣಗಳ ಕಂಡು ಬಂತು. ಮಾ.11 ರಂದು 41 ಡಿಗ್ರಿ:ಸಿ ತಾಪಮಾನವಿದ್ದು ಜನತೆ ಬಿಸಿಲ ಝಳಕ್ಕೆ ಬೆಂದು ಬಸವಳಿದಿದ್ದರು, ಮಾ.12 ರಂದು ಬಿಸಿಲ ತಾಪ ಅಧಿಕವಾಗಿತ್ತು ಆದರೆ ಸಂಜೆ ವೇಳೆ ವರುಣ ಕೃಪೆಯಿಂದ ಬಿಸಿಲ ಕಾವಿಗೆ ಬೆಂದಿದ್ದ ಇಳೆ, ಜನತೆಗೆ ಮಳೆಯ ಸಿಂಚನದಿಂದ ತಂಪೆರೆದಿದೆ. ಮಾ.12ರಂದು ಮೋಡ ಕವಿದ ವಾತವಾರಣ ತಾಲೂಕಿನ ನಾನಾ ಕಡೆಗಳಲ್ಲಿತ್ತು. ಜನರ ಮಳೆಯ ನೀರಿಕ್ಷೆಯನ್ನು ಆಪೇಕ್ಷಿಸುತ್ತಿದ್ದ ಘಟನೆಗಳು ಕಂಡು ಬಂತು.

ಬಿಸಿಲ ಕಾವು ಕೃಷಿ ಭೂಮಿಗೂ ವ್ಯಾಪಿಸಿ ಬಿಸಿಮುಟ್ಟಿಸಿತ್ತು. ಕೃಷಿಕ ಮೊದಲೇ ಲೋ ವಾಲ್ಟೆಜ್ ಬಾದೆಯಿಂದ ಕಂಗೆಟ್ಟು ಹೋಗಿದ್ದು ಇದರ ನಡುವೆ ಬಿಸಿಲ ಪ್ರತಪಕ್ಕೆ ಬೇಸತ್ತು ಹೋಗಿದ್ದರು. ವರುಣ ಆಗಮನದಿಂದ ಧರೆ ತಂಪೆರದ್ದಂತಾಗಿದೆ.

ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕಳೆಂಜ, ನೆರಿಯ, ಉಜಿರೆ ಗಡುಗು ಸಹಿತ ಗಾಳಿ ಮಳೆ ಸುರಿದಿದೆ. ಕೊಕ್ಕಡ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ. ಧರ್ಮಸ್ಥಳ ಭಾಗದಲ್ಲಿ ಅಲಿಕಲ್ಲು ಮಳೆಯಾಗಿದೆ. ಬೆಳ್ತಂಗಡಿ ಭಾಗದಲ್ಲಿ ಸಂಜೆ ಹೊತ್ತಿಗೆ ಗಾಳಿ ಸಹಿತ ಸಡಿಲುನೊಂದಿಗೆ ಮಳೆಯಾಗಿದೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!