25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಆಯೋಜಿಸಲಾದ 3ನೇ ವರ್ಷದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸಂಘದ ಕಚೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.

ಸಂಘದ ಪ್ರಮುಖ ಸದಸ್ಯರು ಈ ಸಂದರ್ಭದಲ್ಲಿ ಭಾಗವಹಿಸಿ, ಈ ವರ್ಷದ ಕ್ರೀಡಾಕೂಟದ ವೈಶಿಷ್ಟ್ಯಗಳನ್ನು ಹಂಚಿಕೊಂಡರು.ಈ ಬಾರಿ ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಪುರುಷ ಮತ್ತು ಮಹಿಳಾ ವಿಭಾಗಗಳ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಏಪ್ರಿಲ್ 20, 2025, ಶನಿವಾರ, ಸಂಜೆ 5:00 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ, ಕಾಯತ್ತಡ್ಕ, ಕಳಂಜದಲ್ಲಿ ಈ ಕ್ರೀಡಾ ಹಬ್ಬ ಅದ್ಧೂರಿಯಾಗಿ ನಡೆಯಲಿದೆ.

ವಿಶೇಷ ಆಕರ್ಷಣೆ: ಈ ಸಂದರ್ಭದಲ್ಲಿ ಗ್ರಾಮದ ಡಾಕ್ಟರೇಟ್ ಪದವಿಯನ್ನು ಪಡೆದವರನ್ನು, ಕ್ರೀಡಾ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದವರನ್ನು ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡ ನಡೆಯಲಿದೆ.

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಮಾಜ ಸೇವೆ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಂಘದ ಒಗ್ಗಟ್ಟನ್ನು ಬಲಪಡಿಸುವ ಗುರಿ ಹೊಂದಿದ್ದು, ಈ ಕ್ರೀಡಾಕೂಟವು ಯುವ ಕ್ರೀಡಾಪಟುಗಳಿಗೆ ಮಹತ್ವದ ವೇದಿಕೆ ಒದಗಿಸುತ್ತದೆ. ಎಲ್ಲಾ ಕ್ರೀಡಾಪ್ರೇಮಿಗಳು ಮತ್ತು ಸ್ಪರ್ಧಿಗಳು ಈ ಕ್ರೀಡಾ ಹಬ್ಬದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.

Related posts

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya
error: Content is protected !!