July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಆಯೋಜಿಸಲಾದ 3ನೇ ವರ್ಷದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸಂಘದ ಕಚೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.

ಸಂಘದ ಪ್ರಮುಖ ಸದಸ್ಯರು ಈ ಸಂದರ್ಭದಲ್ಲಿ ಭಾಗವಹಿಸಿ, ಈ ವರ್ಷದ ಕ್ರೀಡಾಕೂಟದ ವೈಶಿಷ್ಟ್ಯಗಳನ್ನು ಹಂಚಿಕೊಂಡರು.ಈ ಬಾರಿ ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಪುರುಷ ಮತ್ತು ಮಹಿಳಾ ವಿಭಾಗಗಳ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಏಪ್ರಿಲ್ 20, 2025, ಶನಿವಾರ, ಸಂಜೆ 5:00 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ, ಕಾಯತ್ತಡ್ಕ, ಕಳಂಜದಲ್ಲಿ ಈ ಕ್ರೀಡಾ ಹಬ್ಬ ಅದ್ಧೂರಿಯಾಗಿ ನಡೆಯಲಿದೆ.

ವಿಶೇಷ ಆಕರ್ಷಣೆ: ಈ ಸಂದರ್ಭದಲ್ಲಿ ಗ್ರಾಮದ ಡಾಕ್ಟರೇಟ್ ಪದವಿಯನ್ನು ಪಡೆದವರನ್ನು, ಕ್ರೀಡಾ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದವರನ್ನು ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡ ನಡೆಯಲಿದೆ.

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಮಾಜ ಸೇವೆ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಂಘದ ಒಗ್ಗಟ್ಟನ್ನು ಬಲಪಡಿಸುವ ಗುರಿ ಹೊಂದಿದ್ದು, ಈ ಕ್ರೀಡಾಕೂಟವು ಯುವ ಕ್ರೀಡಾಪಟುಗಳಿಗೆ ಮಹತ್ವದ ವೇದಿಕೆ ಒದಗಿಸುತ್ತದೆ. ಎಲ್ಲಾ ಕ್ರೀಡಾಪ್ರೇಮಿಗಳು ಮತ್ತು ಸ್ಪರ್ಧಿಗಳು ಈ ಕ್ರೀಡಾ ಹಬ್ಬದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.

Related posts

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya
error: Content is protected !!