23.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು ಹಾಗೂ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು..

Related posts

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya
error: Content is protected !!