September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು ಹಾಗೂ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು..

Related posts

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya
error: Content is protected !!