March 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

ಮರೋಡಿ: ನಿನ್ನೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಮರೋಡಿಯಲ್ಲಿ ನಡೆದಿದೆ.

ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ ಗಾಳಿ ಮಳೆಯಾಗಿದೆ. ಮರೋಡಿಯಲ್ಲಿಯೂ ಮಳೆಯ ಪ್ರಮಾಣ ಜೋರಾಗಿತ್ತು. ಸಂಜೆ 6.30ಕ್ಕೆ ಸುರಿದ ಜೋರಾದ ಮಳೆಗೆ ಬೃಹತ್‌ ಗಾತ್ರದ ಮರ ಬುಡ ಸಮೇತ ಸಂತೋಷ್ ದೇವಾಡಿಗರವರ ಮನೆಯ ಮೇಲೆ ಉರುಳಿ ಬಿದ್ದಿದೆ. ಮನೆಯಲ್ಲಿ ಸಂತೋಷ ದೇವಾಡಿಗ ಅವರ ತಾಯಿ ಲಲಿತಾ, ತಮ್ಮ ಸಂದೀಪ್ ದೇವಾಡಿಗ, ತಮ್ಮನ ಪತ್ನಿ ರಜನಿ, ಸಣ್ಣ ಪ್ರಾಯದ ಮಗು ಮನೆಯೊಳಗೆ ಇದ್ದರು. ಜೋರಾದ ಶಬ್ದ ಬಂದಾಗ ಎಲ್ಲರೂ ಮನೆಯ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯ ಹಂಚು, ಶೀಟ್, ಅಡುಗೆ ಪಾತ್ರೆ, ಟಿವಿ, ಕಿಟಕಿ, ದಾರಂದ, ವಿದ್ಯುತ್ ಉಪಕರಣಗಳು ಎಲ್ಲವೂ ಹಾನಿಗೊಳಗಾಗಿದೆ.ಲಕ್ಷಾಂತರ ರೂ ನಷ್ಟ ಸಂಭವಿಸಬಹುದೆಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಕಂದಾಯ ಇಲಾಖಾ ಅಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಸ್ಥಳೀಯರಾದ ಸೂರಾಜ್ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

Related posts

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya
error: Content is protected !!