24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ ಪ್ರವೇಶಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಂಜೆ 5.30ಕ್ಕೆ ಉಜಿರೆ ಬೆಳಾಲ್ ಕ್ರಾಸ್‌ನಿಂದ ಭವ್ಯ ರಥಯಾತ್ರೆ, ನಂದಿ ರಥಯಾತ್ರೆಗೆ ಬೆಳ್ತಂಗಡಿ ದೇಸೀ ಗೋಸಂರಕ್ಷಕ ರಮೇಶ್ ಎಸ್. ಚಾಲನೆ ನೀಡಲಿದ್ದಾರೆ. ನಂತರ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಗಂಟೆ 6-30ರಿಂದ ಉಜಿರೆ ಶಾರದಾ ಮಂಟಪದಲ್ಲಿ ಸಭಾ ಕಾರ್ಯಕ್ರಮ, ಸಭಾಧ್ಯಕ್ಷತೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತಸರರು ಶರತ್‌ಕೃಷ್ಣ ಪಡ್ಡೆಟ್ನಾಯ ವಹಿಸಲಿದ್ದಾರೆ. ನಂದಿ ರಥಯಾತ್ರೆ ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.

ಕಳೆಂಜ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ, ಅಧ್ಯಕ್ಷ ಡಾ| ಎಂ.ಎಂ. ದಯಾಕರ್ ಉಪಸ್ಥಿತರಿರುವರು.

ನಂದಿ ರಥಯಾತ್ರೆ ಗುರಿ: ಒಂದು ಕೋಟಿ ಗೋಮಯ ಹಣತೆ, 1,11,108 ವಿಷ್ಣು ಸಹಸ್ರನಾಮ ಪಾರಾಯಣ, 108 ಸ್ಥಾನಗಳಲ್ಲಿ ಗವ್ಯ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟನೆ, ಆರೋಗ್ಯಯುತ, ಸ್ವಾವಲಂಬಿ, ಸುಸಂಪನ್ನ, ಸಮೃದ್ಧ, ವಿಶ್ವಗುರು ಭಾರತ. ನಂದಿಯಿಂದ ಫಲವತ್ತಾದ ಮಣ್ಣು, ಶುದ್ಧ ನೀರು & ಗಾಳಿ, ಪರಿಸರ ಸಂರಕ್ಷಣೆ.

Related posts

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!