23 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ ಪ್ರವೇಶಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಂಜೆ 5.30ಕ್ಕೆ ಉಜಿರೆ ಬೆಳಾಲ್ ಕ್ರಾಸ್‌ನಿಂದ ಭವ್ಯ ರಥಯಾತ್ರೆ, ನಂದಿ ರಥಯಾತ್ರೆಗೆ ಬೆಳ್ತಂಗಡಿ ದೇಸೀ ಗೋಸಂರಕ್ಷಕ ರಮೇಶ್ ಎಸ್. ಚಾಲನೆ ನೀಡಲಿದ್ದಾರೆ. ನಂತರ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಗಂಟೆ 6-30ರಿಂದ ಉಜಿರೆ ಶಾರದಾ ಮಂಟಪದಲ್ಲಿ ಸಭಾ ಕಾರ್ಯಕ್ರಮ, ಸಭಾಧ್ಯಕ್ಷತೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತಸರರು ಶರತ್‌ಕೃಷ್ಣ ಪಡ್ಡೆಟ್ನಾಯ ವಹಿಸಲಿದ್ದಾರೆ. ನಂದಿ ರಥಯಾತ್ರೆ ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.

ಕಳೆಂಜ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ, ಅಧ್ಯಕ್ಷ ಡಾ| ಎಂ.ಎಂ. ದಯಾಕರ್ ಉಪಸ್ಥಿತರಿರುವರು.

ನಂದಿ ರಥಯಾತ್ರೆ ಗುರಿ: ಒಂದು ಕೋಟಿ ಗೋಮಯ ಹಣತೆ, 1,11,108 ವಿಷ್ಣು ಸಹಸ್ರನಾಮ ಪಾರಾಯಣ, 108 ಸ್ಥಾನಗಳಲ್ಲಿ ಗವ್ಯ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟನೆ, ಆರೋಗ್ಯಯುತ, ಸ್ವಾವಲಂಬಿ, ಸುಸಂಪನ್ನ, ಸಮೃದ್ಧ, ವಿಶ್ವಗುರು ಭಾರತ. ನಂದಿಯಿಂದ ಫಲವತ್ತಾದ ಮಣ್ಣು, ಶುದ್ಧ ನೀರು & ಗಾಳಿ, ಪರಿಸರ ಸಂರಕ್ಷಣೆ.

Related posts

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya
error: Content is protected !!