23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ ಪ್ರವೇಶಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಂಜೆ 5.30ಕ್ಕೆ ಉಜಿರೆ ಬೆಳಾಲ್ ಕ್ರಾಸ್‌ನಿಂದ ಭವ್ಯ ರಥಯಾತ್ರೆ, ನಂದಿ ರಥಯಾತ್ರೆಗೆ ಬೆಳ್ತಂಗಡಿ ದೇಸೀ ಗೋಸಂರಕ್ಷಕ ರಮೇಶ್ ಎಸ್. ಚಾಲನೆ ನೀಡಲಿದ್ದಾರೆ. ನಂತರ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಗಂಟೆ 6-30ರಿಂದ ಉಜಿರೆ ಶಾರದಾ ಮಂಟಪದಲ್ಲಿ ಸಭಾ ಕಾರ್ಯಕ್ರಮ, ಸಭಾಧ್ಯಕ್ಷತೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತಸರರು ಶರತ್‌ಕೃಷ್ಣ ಪಡ್ಡೆಟ್ನಾಯ ವಹಿಸಲಿದ್ದಾರೆ. ನಂದಿ ರಥಯಾತ್ರೆ ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.

ಕಳೆಂಜ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ, ಅಧ್ಯಕ್ಷ ಡಾ| ಎಂ.ಎಂ. ದಯಾಕರ್ ಉಪಸ್ಥಿತರಿರುವರು.

ನಂದಿ ರಥಯಾತ್ರೆ ಗುರಿ: ಒಂದು ಕೋಟಿ ಗೋಮಯ ಹಣತೆ, 1,11,108 ವಿಷ್ಣು ಸಹಸ್ರನಾಮ ಪಾರಾಯಣ, 108 ಸ್ಥಾನಗಳಲ್ಲಿ ಗವ್ಯ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟನೆ, ಆರೋಗ್ಯಯುತ, ಸ್ವಾವಲಂಬಿ, ಸುಸಂಪನ್ನ, ಸಮೃದ್ಧ, ವಿಶ್ವಗುರು ಭಾರತ. ನಂದಿಯಿಂದ ಫಲವತ್ತಾದ ಮಣ್ಣು, ಶುದ್ಧ ನೀರು & ಗಾಳಿ, ಪರಿಸರ ಸಂರಕ್ಷಣೆ.

Related posts

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!